12:18 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ತಮಿಳುನಾಡು:10 ರೂ.ಗಳ ನಾಣ್ಯ ಕೊಟ್ಟು 6 ಲಕ್ಷ ಮೌಲ್ಯದ ಕಾರು ಖರೀದಿಸಿದ ಅಂಗಡಿ ಮಾಲೀಕ!

21/06/2022, 17:51

ಚೆನ್ನೈ(reporterkarnataka.com): ಜನರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದರಿಂದ ಬೇಸತ್ತ ತಮಿಳುನಾಡಿನ ವ್ಯಕ್ತಿಯೊಬ್ಬರು 10 ರೂ. ನಾಣ್ಯಗಳನ್ನು ಸಂಗ್ರಹಿಸಿ ಅದರಿಂದಲೇ 6 ಲಕ್ಷ ರೂ.ಮೌಲ್ಯದ ಕಾರು ಖರೀದಿಸಿದ್ದಾರೆ.

ಅರೂರು ನಿವಾಸಿಯಾದ ವೆಟ್ರಿವೇಲ್‌ ಎಂಬವರು ತಾಯಿಯ ಅಂಗಡಿಯನ್ನು ನಡೆಸುತ್ತಿದ್ದರು. ಗ್ರಾಹಕರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ ಅಂಗಡಿಯಲ್ಲಿ 10 ರೂ. ನಾಣ್ಯಗಳು ದೊಡ್ಡ ಮಟ್ಟದಲ್ಲಿ ಸಂಗ್ರಹವಾಗಿದ್ದವು. 10 ರೂ. ನಾಣ್ಯಗಳು ಇನ್ನೂ ಬಳಕೆಗೆ ಯೋಗ್ಯವಾಗಿವೆ ಎಂದು ಅರಿವು ಮೂಡಿಸಲು ಸುಮಾರು 6 ಲಕ್ಷ ರೂ. ಮೌಲ್ಯದ ನಾಣ್ಯಗಳನ್ನು ಸಂಗ್ರಹಿಸಿ ಅದರಿಂದ ವೆಟ್ರಿವೇಲ ಕಾರನ್ನು ಖರೀದಿಸಿದ್ದಾರೆ.

ದೊಡ್ಡ ಚೀಲದಲ್ಲಿ ನಾಣ್ಯಗಳೊಂದಿಗೆ ಧರ್ಮಪುರಿಯ ಕಾರು ಶೋ ರೂಮಿಗೆ ಕಾರು ಖರೀದಿಸಲು ಬಂದಾಗ ಮೊದಲು ಅಲ್ಲಿನ ಸಿಬ್ಬಂದಿಗಳಿಗೆ ಆಶ್ಚರ್ಯವಾಯಿತು. ನಂತರ ವೆಟ್ರಿವೇಲ್‌ ದೃಢ ನಿರ್ಣಯ ನೋಡಿ ಕಾರು ಮಾರಾಟ ಮಾಡಲು ಒಪ್ಪಿಕೊಂಡರು. ಚೀಲಗಟ್ಟಲೆ ನಾಣ್ಯಗಳನ್ನು ಎಣಿಸಿದ ನಂತರ ಕೊನೆಗೂ ಮಾರುತಿ ಸುಜುಕಿ ಇಕೋ ಕಾರನ್ನು ವೆಟ್ರಿವೇಲನಿಗೆ ಹಸ್ತಾಂತರಿಸಲಾಗಿದೆ’ ಎಂದು ಶೋ ರೂಂನವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು