6:08 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ತಮಿಳುನಾಡು:10 ರೂ.ಗಳ ನಾಣ್ಯ ಕೊಟ್ಟು 6 ಲಕ್ಷ ಮೌಲ್ಯದ ಕಾರು ಖರೀದಿಸಿದ ಅಂಗಡಿ ಮಾಲೀಕ!

21/06/2022, 17:51

ಚೆನ್ನೈ(reporterkarnataka.com): ಜನರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದರಿಂದ ಬೇಸತ್ತ ತಮಿಳುನಾಡಿನ ವ್ಯಕ್ತಿಯೊಬ್ಬರು 10 ರೂ. ನಾಣ್ಯಗಳನ್ನು ಸಂಗ್ರಹಿಸಿ ಅದರಿಂದಲೇ 6 ಲಕ್ಷ ರೂ.ಮೌಲ್ಯದ ಕಾರು ಖರೀದಿಸಿದ್ದಾರೆ.

ಅರೂರು ನಿವಾಸಿಯಾದ ವೆಟ್ರಿವೇಲ್‌ ಎಂಬವರು ತಾಯಿಯ ಅಂಗಡಿಯನ್ನು ನಡೆಸುತ್ತಿದ್ದರು. ಗ್ರಾಹಕರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ ಅಂಗಡಿಯಲ್ಲಿ 10 ರೂ. ನಾಣ್ಯಗಳು ದೊಡ್ಡ ಮಟ್ಟದಲ್ಲಿ ಸಂಗ್ರಹವಾಗಿದ್ದವು. 10 ರೂ. ನಾಣ್ಯಗಳು ಇನ್ನೂ ಬಳಕೆಗೆ ಯೋಗ್ಯವಾಗಿವೆ ಎಂದು ಅರಿವು ಮೂಡಿಸಲು ಸುಮಾರು 6 ಲಕ್ಷ ರೂ. ಮೌಲ್ಯದ ನಾಣ್ಯಗಳನ್ನು ಸಂಗ್ರಹಿಸಿ ಅದರಿಂದ ವೆಟ್ರಿವೇಲ ಕಾರನ್ನು ಖರೀದಿಸಿದ್ದಾರೆ.

ದೊಡ್ಡ ಚೀಲದಲ್ಲಿ ನಾಣ್ಯಗಳೊಂದಿಗೆ ಧರ್ಮಪುರಿಯ ಕಾರು ಶೋ ರೂಮಿಗೆ ಕಾರು ಖರೀದಿಸಲು ಬಂದಾಗ ಮೊದಲು ಅಲ್ಲಿನ ಸಿಬ್ಬಂದಿಗಳಿಗೆ ಆಶ್ಚರ್ಯವಾಯಿತು. ನಂತರ ವೆಟ್ರಿವೇಲ್‌ ದೃಢ ನಿರ್ಣಯ ನೋಡಿ ಕಾರು ಮಾರಾಟ ಮಾಡಲು ಒಪ್ಪಿಕೊಂಡರು. ಚೀಲಗಟ್ಟಲೆ ನಾಣ್ಯಗಳನ್ನು ಎಣಿಸಿದ ನಂತರ ಕೊನೆಗೂ ಮಾರುತಿ ಸುಜುಕಿ ಇಕೋ ಕಾರನ್ನು ವೆಟ್ರಿವೇಲನಿಗೆ ಹಸ್ತಾಂತರಿಸಲಾಗಿದೆ’ ಎಂದು ಶೋ ರೂಂನವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು