7:59 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್…

ಇತ್ತೀಚಿನ ಸುದ್ದಿ

ತವರಿಗೆ ಬಂದ ಸೇನಾನಿಗಳಿಗೆ ಅದ್ದೂರಿ  ಸ್ವಾಗತ: ಹೂ ಕೊಟ್ಟು  ಹೀರೋಗಳಿಗೆ ಸೆಲ್ಯೂಟ್ ಮಾಡಿದ ಪುಟಾಣಿಗಳು.!

09/01/2022, 22:02

ಚಿಕ್ಕಮಗಳೂರು(reporterkarnataka.com): ಇಡೀ ಜೀವನವನ್ನೇ ಸೇವೆಗಾಗಿ ಮುಡಿಪಾಗಿಟ್ಟು ಹುಟ್ಟೂರಿಗೆ ಬಂದ ಯೋಧರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.

ದೇಶ ಕಾಯುವ ಹೀರೋಗಳಿಗೂ ಕೊಟ್ಟ ಸ್ವಾಗತ ನಿಜಕ್ಕೂ ವೀರ ಯೋಧರನ್ನು ಮೂಕ ವಿಸ್ಮಿತಗೊಳಿಸಿತು.

ಅಲ್ಲಿ ಇಡೀ ಊರಿಗೆ ಊರೇ ಹಬ್ಬದ ಸಡಗರದಲ್ಲಿ ಮುಳುಗಿತ್ತು. ಎತ್ತ ನೋಡಿದ್ರೂ ಪಟಾಕಿಯ ಸದ್ದು, ಡೊಳ್ಳಿನ ಕುಣಿತ..! ಭಾರತಾಂಬೆಗೆ ಜೈ, ವೀರಯೋಧರಿಗೆ ಜೈ ಅನ್ನೋ ಜೈಕಾರ..! ರಸ್ತೆಯುದ್ದಕ್ಕೂ ನಿಂತು ತಮ್ಮ ನೆಚ್ಚಿನ ಹೀರೋಗಳಿಗೆ ಶಾಲಾ ಮಕ್ಕಳು ಸ್ವಾಗತ ಕೋರುತ್ತಿದ್ದರು..! 

ಅಷ್ಟಕ್ಕೂ ಈ ಸಡಗರ ಸಂಭ್ರಮಕ್ಕೆ ಕಾರಣವಾಗಿದ್ದು ಆ ಮೂವರು ಯೋಧರು. 

 ಈ ದೃಶ್ಯ ಕಂಡು ಬಂದಿದ್ದು  ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ.. ಭಾರತಾಂಬೆಯನ್ನ ಸೇವೆ ಮುಗಿಸಿ ಯೋಧರು ತಮ್ಮೂರಿನ  ಬರುವಿಕೆಯನ್ನು  ಚಿಕ್ಕ ಚಿಕ್ಕ ಮಕ್ಕಳಿಂದ ಹಿಡಿದು ಗ್ರಾಮದ ವೃದ್ಧರವರೆಗೂ ಕಾತರ-ಕುತೂಹಲದಿಂದ ನೋಡುತ್ತಿದ್ದರು.

 ಭಾರತೀಯ ಸೇನೆಯಲ್ಲಿ ಬರೋಬ್ಬರಿ 20ಕ್ಕೂ ಹೆಚ್ಚು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿ ತವರೂರಿಗೆ ಆಗಮಿಸಿದ ಏರ್ಫೋರ್ಸ್ ನ ಆರ್ ಶ್ರೀಕಾಂತ್, ಬಿಎಸ್ಎಫ್ ನ ಕೃಷ್ಣಮೂರ್ತಿ, ಗುರಪ್ಪರವರನ್ನು ಅದ್ಧೂರಿಯಾಗಿ ಸ್ವಾಗತಿಸಿದ ಅಜ್ಜಂಪುರದ ಜನತೆ ಆತ್ಮೀಯವಾಗಿ ಬರಮಾಡಿಕೊಂಡರು. 

ಪಟ್ಟಣದ ಮೂರ್ನಾಲ್ಕು ಕಿಲೋ ಮೀಟರ್ ತೆರೆದ ಜೀಪಿನಲ್ಲಿ ರಾಲಿ ಮಾಡಿ ಸಂಭ್ರಮಿಸಿದರು. ದಾರಿಯುದ್ದಕ್ಕೂ ಭಾರತ್ ಮಾತಾಕಿ ಜೈ, ವಂದೇ ಮಾತರಾಂ ಅನ್ನೋ ಘೋಷ ವಾಕ್ಯ ಮೊಳಗಿತ್ತು.

ವೀರ ಯೋಧರು ಊರಿಗೆ ಆಗಮಿಸುತ್ತಿದ್ದಂತೆ ಶಾಲಾ ಮಕ್ಕಳು ತಮ್ಮ ನೆಚ್ಚಿನ  ಹೀರೋಗಳಿಗೆ  ಹೂ ನೀಡಿ, ಸೆಲ್ಯೂಟ್ ಹೊಡೆದು ದೇಶಪ್ರೇಮ ಮೆರದರು.

ತಮ್ಮೂರಿನ ಜನರು ನೀಡಿದ ಗ್ರ್ಯಾಂಡ್ ವೆಲ್ಕಂ ನೋಡಿ ಮೂವರು ಯೋಧರು ಸೇವೆಯ ಸಾರ್ಥಕತೆ ಅನುಭವಿಸಿದರು. ಇಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಿ ಬಂದಾಗ ಈ ರೀತಿಯ ಒಂದು ಸತ್ಕಾರ ಸಿಗುತ್ತೆ ಅನ್ನೋ ಕಲ್ಪನೆ ಯೋಧರಿಗಿರಲಿಲ್ಲ.

ಯೋಧರಿಗೆ ಜೈಕಾರ ಹಾಕಿ ದೇಶಪ್ರೇಮ ಮೆರೆದರು.

ಇತ್ತೀಚಿನ ಸುದ್ದಿ

ಜಾಹೀರಾತು