8:28 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ತೊಕ್ಕೊಟ್ಟು ಸಮೀಪ ಭೀಕರ ರಸ್ತೆ ಅಪಘಾತ: ಟ್ಯಾಂಕರ್ ಅಡಿಗೆ ಸಿಲುಕಿ ಬೈಕ್ ಸಹ ಸವಾರೆ ದಾರುಣ ಸಾವು

09/11/2024, 21:57

ಉಳ್ಳಾಲ(reporterkarnataka.com): ತೊಕ್ಕೊಟ್ಟು ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸಹ ಸವಾರೆ ಮೃತಪಟ್ಟ ದಾರುಣ ಘಟನೆ ನಡೆದಿದೆ.


ಮೃತಪಟ್ಟ ಮಹಿಳೆಯನ್ನು ಸುರತ್ಕಲ್ ಸಮೀಪದ ಕೃಷ್ಣಾಪುರದ ರಹಮತ್(47) ಎಂದು ಗುರುತಿಸಲಾಗಿದೆ. ಬೈಕ್ ಸವಾರರಾಗಿದ್ದ ಅವರ ಪತಿ ಅಬ್ದುಲ್ ರಶೀದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಸಮರ್ಪಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ವೇಳೆ ಟ್ಯಾಂಕರ್‌ವೊಂದರ ಅಡಿಗೆ ಬಿದ್ದ ಪರಿಣಾಮ, ಹಿಂಬದಿ ಸವಾರರಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ತೊಕ್ಕೊಟ್ಟು – ಚೆಂಬುಗುಡ್ಡೆ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿ ನೂರಾರು ಸಾರ್ವಜನಿಕರು ಆಕ್ರೋಶಗೊಂಡು ಸೇರಿದ್ದರಿಂದ, ಟ್ರಾಫಿಕ್ ಜಾಮ್ ಉಂಟಾಯಿತು.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸದ್ಯ ಮಹಿಳೆಯ ಮೃತದೇಹವನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಪೊಲೀಸರ ಪ್ರಕ್ರಿಯೆ ಮುಗಿದ ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಿದ್ದೇವೆ ಎಂದು ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
….

“ಮಂಗಳೂರು ನಗರದಿಂದ ದೇರಳಕಟ್ಟೆಗೆ ತೆರಳುವ ತೊಕ್ಕೊಟ್ಟು – ಚೆಂಬುಗುಡ್ಡೆಯ ರಸ್ತೆಯು ಪ್ರಮುಖ ರಸ್ತೆಯಾಗಿದ್ದು, ಪ್ರಮುಖ ಮೂರು ನಾಲ್ಕು ಆಸ್ಪತ್ರೆ, ಕಾಲೇಜು, ವಿವಿಗಳನ್ನು ಸಂಪರ್ಕಿಸುತ್ತದೆ. ಇಲ್ಲಿನ ರಸ್ತೆಯು ಸಂಪೂರ್ಣ ಹಾಳಾಗಿ, ಸುಮಾರು ವರ್ಷಗಳೇ ಕಳೆದಿದೆ. ಆದರೂ ಕೂಡ, ಉಳ್ಳಾಲದ ಶಾಸಕರಾದ ಸ್ಪೀಕರ್ ಯು ಟಿ ಖಾದರ್ ಅಗಲೀ, ಉಳ್ಳಾಲ ನಗರಸಭೆಯ ಅಧಿಕಾರಿಗಳಾಗಲೀ ಈವರೆಗೆ ಕ್ರಮ ಕೈಗೊಂಡಿಲ್ಲ. ಚೊಂಬುಗುಡ್ಡೆ ರಸ್ತೆ ಸರಿಯಾಗಲು ಇನ್ನೆಷ್ಟು ಜನರ ಪ್ರಾಣ ಹೋಗಬೇಕು” ಎಂದು ಸ್ಥಳೀಯಗಳು ಆಕ್ರೋಶ ಹೊರಹಾಕಿದ್ದಾರೆ.

“ಇಂದಿನ ಘಟನೆಗೆ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ. ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡಬೇಕು. ಕೂಡಲೇ ಚೊಂಬುಗುಡ್ಡೆ ರಸ್ತೆಯನ್ನು ಸರಿಪಡಿಸಲು ಶಾಸಕ ಯು ಟಿ ಖಾದರ್ ಮುತುವರ್ಜಿ ವಹಿಸಬೇಕು” ಎಂದು ಸ್ಥಳೀಯ ತರಕಾರಿ ವ್ಯಾಪಾರಿಯೋರ್ವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು