7:45 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ಕಾನೂನು ಸಮರ

31/10/2022, 23:07

ಮಂಗಳೂರು(reporterkarnataka.com):ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರಮುಖರಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಶಾಸಕ ಕಾಮತ್ ತಕ್ಷಣವೇ ಪ್ರಕರಣ ದಾಖಲಿಸುವಂತೆ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ತುಳುವರ ನಂಬಿಕೆಗಳನ್ನು ಅಪಹಾಸ್ಯ ಮಾಡುವುದು, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಬರೆಯುವುದು ಗಮನಕ್ಕೆ ಬಂದಿದೆ. ಈಗಾಗಲೇ ಈ ಕುರಿತು ಪೊಲೀಸ್ ಆಯುಕ್ತರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಅಪರಾಧಿಗಳ ಮೇಲೆ ಕಾನೂನು ಕ್ರಮ ಜರಗಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬಳಿಕ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಅವರನ್ನು ಭೇಟಿಯಾಗಿರುವ ಯುವ ವೇದಿಕೆಯ ಪ್ರಮುಖರು ಸೂಕ್ತ ಕ್ರಮ ಕೈಗೊಳ್ಳುವಂತೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಈಗಾಗಲೇ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ ಸಜ್ಜಾಗಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ದಯಾನಂದ ಜಿ ಕತ್ತಲ್ಸರ್. ತುಳುನಾಡ ದೈವರಾದನೆ ಯುವ ವೇದಿಕೆ (ರಿ) ಸಂಚಾಲಕರಾದ ಭರತ್ ಬಲ್ಲಾಲ್ ಬಾಗ್, ರೋಶನ್ ರೆನೋಲ್ಡ್ , ಸಂತೋಷ್ ಕುಮಾರ್, ತುಲು ರಾಜ್ಯ ಬಾಷೆ ಸಮಿತಿಯ ಚರಿತ್ ಪೂಜಾರಿ, ಮುಂಡಲ ಯುವ ವೇದಿಕೆ ಅಧ್ಯಕ್ಷ ಜಯಚಂದ್ರ‌ ಕೊಟ್ಟರ ಕ್ರಾಸ್, ಸಂಘಟನಾ ಕಾರ್ಯದರ್ಶಿ ರವಿ ಕುದುಮುಲ್ ಗಾರ್ಡನ್, ನಂದೀಶ್, ಪ್ರಕ್ಯತ್, ನಂದನ್ ಯುವರಾಜ್, ಅಭಿಷ್ ಪ್ರಿತೇಶ್, ಧನುಷ್, ಫ್ರಾನ್ಸಿಸ್ ಡಿಸೋಜಾ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು