11:47 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ಕಾನೂನು ಸಮರ

31/10/2022, 23:07

ಮಂಗಳೂರು(reporterkarnataka.com):ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರಮುಖರಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಶಾಸಕ ಕಾಮತ್ ತಕ್ಷಣವೇ ಪ್ರಕರಣ ದಾಖಲಿಸುವಂತೆ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ತುಳುವರ ನಂಬಿಕೆಗಳನ್ನು ಅಪಹಾಸ್ಯ ಮಾಡುವುದು, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಬರೆಯುವುದು ಗಮನಕ್ಕೆ ಬಂದಿದೆ. ಈಗಾಗಲೇ ಈ ಕುರಿತು ಪೊಲೀಸ್ ಆಯುಕ್ತರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಅಪರಾಧಿಗಳ ಮೇಲೆ ಕಾನೂನು ಕ್ರಮ ಜರಗಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬಳಿಕ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಅವರನ್ನು ಭೇಟಿಯಾಗಿರುವ ಯುವ ವೇದಿಕೆಯ ಪ್ರಮುಖರು ಸೂಕ್ತ ಕ್ರಮ ಕೈಗೊಳ್ಳುವಂತೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಈಗಾಗಲೇ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ ಸಜ್ಜಾಗಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ದಯಾನಂದ ಜಿ ಕತ್ತಲ್ಸರ್. ತುಳುನಾಡ ದೈವರಾದನೆ ಯುವ ವೇದಿಕೆ (ರಿ) ಸಂಚಾಲಕರಾದ ಭರತ್ ಬಲ್ಲಾಲ್ ಬಾಗ್, ರೋಶನ್ ರೆನೋಲ್ಡ್ , ಸಂತೋಷ್ ಕುಮಾರ್, ತುಲು ರಾಜ್ಯ ಬಾಷೆ ಸಮಿತಿಯ ಚರಿತ್ ಪೂಜಾರಿ, ಮುಂಡಲ ಯುವ ವೇದಿಕೆ ಅಧ್ಯಕ್ಷ ಜಯಚಂದ್ರ‌ ಕೊಟ್ಟರ ಕ್ರಾಸ್, ಸಂಘಟನಾ ಕಾರ್ಯದರ್ಶಿ ರವಿ ಕುದುಮುಲ್ ಗಾರ್ಡನ್, ನಂದೀಶ್, ಪ್ರಕ್ಯತ್, ನಂದನ್ ಯುವರಾಜ್, ಅಭಿಷ್ ಪ್ರಿತೇಶ್, ಧನುಷ್, ಫ್ರಾನ್ಸಿಸ್ ಡಿಸೋಜಾ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು