6:54 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ಕಾನೂನು ಸಮರ

31/10/2022, 23:07

ಮಂಗಳೂರು(reporterkarnataka.com):ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರಮುಖರಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಶಾಸಕ ಕಾಮತ್ ತಕ್ಷಣವೇ ಪ್ರಕರಣ ದಾಖಲಿಸುವಂತೆ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ತುಳುವರ ನಂಬಿಕೆಗಳನ್ನು ಅಪಹಾಸ್ಯ ಮಾಡುವುದು, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಬರೆಯುವುದು ಗಮನಕ್ಕೆ ಬಂದಿದೆ. ಈಗಾಗಲೇ ಈ ಕುರಿತು ಪೊಲೀಸ್ ಆಯುಕ್ತರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಅಪರಾಧಿಗಳ ಮೇಲೆ ಕಾನೂನು ಕ್ರಮ ಜರಗಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬಳಿಕ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಅವರನ್ನು ಭೇಟಿಯಾಗಿರುವ ಯುವ ವೇದಿಕೆಯ ಪ್ರಮುಖರು ಸೂಕ್ತ ಕ್ರಮ ಕೈಗೊಳ್ಳುವಂತೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಈಗಾಗಲೇ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ ಸಜ್ಜಾಗಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ದಯಾನಂದ ಜಿ ಕತ್ತಲ್ಸರ್. ತುಳುನಾಡ ದೈವರಾದನೆ ಯುವ ವೇದಿಕೆ (ರಿ) ಸಂಚಾಲಕರಾದ ಭರತ್ ಬಲ್ಲಾಲ್ ಬಾಗ್, ರೋಶನ್ ರೆನೋಲ್ಡ್ , ಸಂತೋಷ್ ಕುಮಾರ್, ತುಲು ರಾಜ್ಯ ಬಾಷೆ ಸಮಿತಿಯ ಚರಿತ್ ಪೂಜಾರಿ, ಮುಂಡಲ ಯುವ ವೇದಿಕೆ ಅಧ್ಯಕ್ಷ ಜಯಚಂದ್ರ‌ ಕೊಟ್ಟರ ಕ್ರಾಸ್, ಸಂಘಟನಾ ಕಾರ್ಯದರ್ಶಿ ರವಿ ಕುದುಮುಲ್ ಗಾರ್ಡನ್, ನಂದೀಶ್, ಪ್ರಕ್ಯತ್, ನಂದನ್ ಯುವರಾಜ್, ಅಭಿಷ್ ಪ್ರಿತೇಶ್, ಧನುಷ್, ಫ್ರಾನ್ಸಿಸ್ ಡಿಸೋಜಾ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು