10:06 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ಕಾನೂನು ಸಮರ

31/10/2022, 23:07

ಮಂಗಳೂರು(reporterkarnataka.com):ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರಮುಖರಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಶಾಸಕ ಕಾಮತ್ ತಕ್ಷಣವೇ ಪ್ರಕರಣ ದಾಖಲಿಸುವಂತೆ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ತುಳುವರ ನಂಬಿಕೆಗಳನ್ನು ಅಪಹಾಸ್ಯ ಮಾಡುವುದು, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಬರೆಯುವುದು ಗಮನಕ್ಕೆ ಬಂದಿದೆ. ಈಗಾಗಲೇ ಈ ಕುರಿತು ಪೊಲೀಸ್ ಆಯುಕ್ತರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಅಪರಾಧಿಗಳ ಮೇಲೆ ಕಾನೂನು ಕ್ರಮ ಜರಗಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬಳಿಕ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಅವರನ್ನು ಭೇಟಿಯಾಗಿರುವ ಯುವ ವೇದಿಕೆಯ ಪ್ರಮುಖರು ಸೂಕ್ತ ಕ್ರಮ ಕೈಗೊಳ್ಳುವಂತೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಈಗಾಗಲೇ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸ್ ಇಲಾಖೆ ಸಜ್ಜಾಗಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ದಯಾನಂದ ಜಿ ಕತ್ತಲ್ಸರ್. ತುಳುನಾಡ ದೈವರಾದನೆ ಯುವ ವೇದಿಕೆ (ರಿ) ಸಂಚಾಲಕರಾದ ಭರತ್ ಬಲ್ಲಾಲ್ ಬಾಗ್, ರೋಶನ್ ರೆನೋಲ್ಡ್ , ಸಂತೋಷ್ ಕುಮಾರ್, ತುಲು ರಾಜ್ಯ ಬಾಷೆ ಸಮಿತಿಯ ಚರಿತ್ ಪೂಜಾರಿ, ಮುಂಡಲ ಯುವ ವೇದಿಕೆ ಅಧ್ಯಕ್ಷ ಜಯಚಂದ್ರ‌ ಕೊಟ್ಟರ ಕ್ರಾಸ್, ಸಂಘಟನಾ ಕಾರ್ಯದರ್ಶಿ ರವಿ ಕುದುಮುಲ್ ಗಾರ್ಡನ್, ನಂದೀಶ್, ಪ್ರಕ್ಯತ್, ನಂದನ್ ಯುವರಾಜ್, ಅಭಿಷ್ ಪ್ರಿತೇಶ್, ಧನುಷ್, ಫ್ರಾನ್ಸಿಸ್ ಡಿಸೋಜಾ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು