4:02 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ತುಂಬೆ: ನೇತ್ರಾವತಿಗೆ ಬಾಗಿನ‌ ಅರ್ಪಣೆ, ಗಂಗಾ ಪೂಜೆ; ಜಲಸಿರಿ ಪೂರ್ಣಗೊಂಡಲ್ಲಿ ದಿನದ 24 ತಾಸು ನೀರು: ಮೇಯರ್ ಮನೋಜ್

26/02/2025, 22:33

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ತುಂಬೆ ಕಿಂಡಿ ಅಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಸಮರ್ಪಣೆ ಮಾಡಿ ಗಂಗಾ ಪೂಜೆಯನ್ನು ಮಂಗಳೂರು ಮೇಯರ್ ಮನೋಜ್ ಕುಮಾರ್ ನೆರವೇರಿಸಿದರು.
ಮಂಗಳೂರು ಮಹಾನಗರಕ್ಕೆ ಮತ್ತು ಬಂಟ್ವಾಳ ‌ತಾಲೂಕಿನ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ನೇತ್ರಾವತಿ ನದಿ ಮಾತೆಗೆ ಸಮಾನ. ನದಿ ಪರಿಸರದ ಕೃಷಿಕರಿಗೆ ಅನ್ನದಾತೆಯಾಗಿದ್ದಾಳೆ. ನಿರಂತರವಾಗಿ ಹರಿದು ರೈತರ ಜೀವನಾಡಿಯಾಗಿದ್ದಾಳೆ.
ಸದ್ಯ 6 ಮೀಟರ್ ನೀರಿದ್ದು ನೀರಿನ ಕೊರತೆಯಾಗದು. ಎಡಿಬಿ 780 ಕೋಟಿ ವೆಚ್ಚದಲ್ಲಿ ಜಲಸಿರಿ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಂಡಲ್ಲಿ ದಿನದ 24 ಗಂಟೆಯೂ ಮಂಗಳೂರಿಗೆ ನೀರು ಪೂರೈಕೆಯಾಗಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದರು.
ಪಾಲಿಕೆ ವಿಪಕ್ಷ ನಾಯಕ‌ ಅನಿಲ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉಪಮೇಯರ್ ಭಾನುಮತಿ, ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್,ಪಾಲಿಕೆ‌ ಸಚೇತಕ ಪ್ರೇಮಾನಂದ ಶೆಟ್ಟಿ, ಜಯಾನಂದ‌ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು