9:14 AM Saturday6 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ತುಂಬೆ: ನೇತ್ರಾವತಿಗೆ ಬಾಗಿನ‌ ಅರ್ಪಣೆ, ಗಂಗಾ ಪೂಜೆ; ಜಲಸಿರಿ ಪೂರ್ಣಗೊಂಡಲ್ಲಿ ದಿನದ 24 ತಾಸು ನೀರು: ಮೇಯರ್ ಮನೋಜ್

26/02/2025, 22:33

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ತುಂಬೆ ಕಿಂಡಿ ಅಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಸಮರ್ಪಣೆ ಮಾಡಿ ಗಂಗಾ ಪೂಜೆಯನ್ನು ಮಂಗಳೂರು ಮೇಯರ್ ಮನೋಜ್ ಕುಮಾರ್ ನೆರವೇರಿಸಿದರು.
ಮಂಗಳೂರು ಮಹಾನಗರಕ್ಕೆ ಮತ್ತು ಬಂಟ್ವಾಳ ‌ತಾಲೂಕಿನ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ನೇತ್ರಾವತಿ ನದಿ ಮಾತೆಗೆ ಸಮಾನ. ನದಿ ಪರಿಸರದ ಕೃಷಿಕರಿಗೆ ಅನ್ನದಾತೆಯಾಗಿದ್ದಾಳೆ. ನಿರಂತರವಾಗಿ ಹರಿದು ರೈತರ ಜೀವನಾಡಿಯಾಗಿದ್ದಾಳೆ.
ಸದ್ಯ 6 ಮೀಟರ್ ನೀರಿದ್ದು ನೀರಿನ ಕೊರತೆಯಾಗದು. ಎಡಿಬಿ 780 ಕೋಟಿ ವೆಚ್ಚದಲ್ಲಿ ಜಲಸಿರಿ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಂಡಲ್ಲಿ ದಿನದ 24 ಗಂಟೆಯೂ ಮಂಗಳೂರಿಗೆ ನೀರು ಪೂರೈಕೆಯಾಗಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದರು.
ಪಾಲಿಕೆ ವಿಪಕ್ಷ ನಾಯಕ‌ ಅನಿಲ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉಪಮೇಯರ್ ಭಾನುಮತಿ, ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್,ಪಾಲಿಕೆ‌ ಸಚೇತಕ ಪ್ರೇಮಾನಂದ ಶೆಟ್ಟಿ, ಜಯಾನಂದ‌ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು