11:46 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ತುಂಬೆ: ನೇತ್ರಾವತಿಗೆ ಬಾಗಿನ‌ ಅರ್ಪಣೆ, ಗಂಗಾ ಪೂಜೆ; ಜಲಸಿರಿ ಪೂರ್ಣಗೊಂಡಲ್ಲಿ ದಿನದ 24 ತಾಸು ನೀರು: ಮೇಯರ್ ಮನೋಜ್

26/02/2025, 22:33

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ತುಂಬೆ ಕಿಂಡಿ ಅಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಸಮರ್ಪಣೆ ಮಾಡಿ ಗಂಗಾ ಪೂಜೆಯನ್ನು ಮಂಗಳೂರು ಮೇಯರ್ ಮನೋಜ್ ಕುಮಾರ್ ನೆರವೇರಿಸಿದರು.
ಮಂಗಳೂರು ಮಹಾನಗರಕ್ಕೆ ಮತ್ತು ಬಂಟ್ವಾಳ ‌ತಾಲೂಕಿನ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ನೇತ್ರಾವತಿ ನದಿ ಮಾತೆಗೆ ಸಮಾನ. ನದಿ ಪರಿಸರದ ಕೃಷಿಕರಿಗೆ ಅನ್ನದಾತೆಯಾಗಿದ್ದಾಳೆ. ನಿರಂತರವಾಗಿ ಹರಿದು ರೈತರ ಜೀವನಾಡಿಯಾಗಿದ್ದಾಳೆ.
ಸದ್ಯ 6 ಮೀಟರ್ ನೀರಿದ್ದು ನೀರಿನ ಕೊರತೆಯಾಗದು. ಎಡಿಬಿ 780 ಕೋಟಿ ವೆಚ್ಚದಲ್ಲಿ ಜಲಸಿರಿ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಂಡಲ್ಲಿ ದಿನದ 24 ಗಂಟೆಯೂ ಮಂಗಳೂರಿಗೆ ನೀರು ಪೂರೈಕೆಯಾಗಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದರು.
ಪಾಲಿಕೆ ವಿಪಕ್ಷ ನಾಯಕ‌ ಅನಿಲ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉಪಮೇಯರ್ ಭಾನುಮತಿ, ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್,ಪಾಲಿಕೆ‌ ಸಚೇತಕ ಪ್ರೇಮಾನಂದ ಶೆಟ್ಟಿ, ಜಯಾನಂದ‌ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು