6:12 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ತುಂಬೆ: ನೇತ್ರಾವತಿಗೆ ಬಾಗಿನ‌ ಅರ್ಪಣೆ, ಗಂಗಾ ಪೂಜೆ; ಜಲಸಿರಿ ಪೂರ್ಣಗೊಂಡಲ್ಲಿ ದಿನದ 24 ತಾಸು ನೀರು: ಮೇಯರ್ ಮನೋಜ್

26/02/2025, 22:33

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ತುಂಬೆ ಕಿಂಡಿ ಅಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಸಮರ್ಪಣೆ ಮಾಡಿ ಗಂಗಾ ಪೂಜೆಯನ್ನು ಮಂಗಳೂರು ಮೇಯರ್ ಮನೋಜ್ ಕುಮಾರ್ ನೆರವೇರಿಸಿದರು.
ಮಂಗಳೂರು ಮಹಾನಗರಕ್ಕೆ ಮತ್ತು ಬಂಟ್ವಾಳ ‌ತಾಲೂಕಿನ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ನೇತ್ರಾವತಿ ನದಿ ಮಾತೆಗೆ ಸಮಾನ. ನದಿ ಪರಿಸರದ ಕೃಷಿಕರಿಗೆ ಅನ್ನದಾತೆಯಾಗಿದ್ದಾಳೆ. ನಿರಂತರವಾಗಿ ಹರಿದು ರೈತರ ಜೀವನಾಡಿಯಾಗಿದ್ದಾಳೆ.
ಸದ್ಯ 6 ಮೀಟರ್ ನೀರಿದ್ದು ನೀರಿನ ಕೊರತೆಯಾಗದು. ಎಡಿಬಿ 780 ಕೋಟಿ ವೆಚ್ಚದಲ್ಲಿ ಜಲಸಿರಿ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಂಡಲ್ಲಿ ದಿನದ 24 ಗಂಟೆಯೂ ಮಂಗಳೂರಿಗೆ ನೀರು ಪೂರೈಕೆಯಾಗಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದರು.
ಪಾಲಿಕೆ ವಿಪಕ್ಷ ನಾಯಕ‌ ಅನಿಲ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉಪಮೇಯರ್ ಭಾನುಮತಿ, ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್,ಪಾಲಿಕೆ‌ ಸಚೇತಕ ಪ್ರೇಮಾನಂದ ಶೆಟ್ಟಿ, ಜಯಾನಂದ‌ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು