8:43 AM Friday5 - June 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ: ಎಲ್ಲ ಇಲಾಖೆಗಳ ಕಾರ್ಯದರ್ಶಿಗಳ ಸಭೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ನೇಮಕ ಕೊಡಗು ಜಿಲ್ಲೆಯಲ್ಲಿ ಜುಲೈ 30ರವರೆಗೆ ಮೀನುಗಾರಿಕೆ ನಿಷೇಧ ಯು.ಟಿ. ಖಾದರ್: ಸ್ಪೀಕರ್ ಸ್ಥಾನದಿಂದ ಮತ್ತೆ ಸಕ್ರೀಯ ರಾಜಕೀಯಕ್ಕೆ; ಡಿಕೆಶಿ ಸಂಪುಟದಲ್ಲಿ ಸಚಿವ… ಡಿ.ಕೆ. ಶಿವಕುಮಾರ್ ರಾಜ್ಯಭಾರ ಶುರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

ಇತ್ತೀಚಿನ ಸುದ್ದಿ

ತುಂಬೆ: ನೇತ್ರಾವತಿಗೆ ಬಾಗಿನ‌ ಅರ್ಪಣೆ, ಗಂಗಾ ಪೂಜೆ; ಜಲಸಿರಿ ಪೂರ್ಣಗೊಂಡಲ್ಲಿ ದಿನದ 24 ತಾಸು ನೀರು: ಮೇಯರ್ ಮನೋಜ್

26/02/2025, 22:33

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ತುಂಬೆ ಕಿಂಡಿ ಅಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಸಮರ್ಪಣೆ ಮಾಡಿ ಗಂಗಾ ಪೂಜೆಯನ್ನು ಮಂಗಳೂರು ಮೇಯರ್ ಮನೋಜ್ ಕುಮಾರ್ ನೆರವೇರಿಸಿದರು.
ಮಂಗಳೂರು ಮಹಾನಗರಕ್ಕೆ ಮತ್ತು ಬಂಟ್ವಾಳ ‌ತಾಲೂಕಿನ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ನೇತ್ರಾವತಿ ನದಿ ಮಾತೆಗೆ ಸಮಾನ. ನದಿ ಪರಿಸರದ ಕೃಷಿಕರಿಗೆ ಅನ್ನದಾತೆಯಾಗಿದ್ದಾಳೆ. ನಿರಂತರವಾಗಿ ಹರಿದು ರೈತರ ಜೀವನಾಡಿಯಾಗಿದ್ದಾಳೆ.
ಸದ್ಯ 6 ಮೀಟರ್ ನೀರಿದ್ದು ನೀರಿನ ಕೊರತೆಯಾಗದು. ಎಡಿಬಿ 780 ಕೋಟಿ ವೆಚ್ಚದಲ್ಲಿ ಜಲಸಿರಿ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಂಡಲ್ಲಿ ದಿನದ 24 ಗಂಟೆಯೂ ಮಂಗಳೂರಿಗೆ ನೀರು ಪೂರೈಕೆಯಾಗಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದರು.
ಪಾಲಿಕೆ ವಿಪಕ್ಷ ನಾಯಕ‌ ಅನಿಲ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉಪಮೇಯರ್ ಭಾನುಮತಿ, ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್,ಪಾಲಿಕೆ‌ ಸಚೇತಕ ಪ್ರೇಮಾನಂದ ಶೆಟ್ಟಿ, ಜಯಾನಂದ‌ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು