3:29 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ತುಂಬೆ: ನೇತ್ರಾವತಿಗೆ ಬಾಗಿನ‌ ಅರ್ಪಣೆ, ಗಂಗಾ ಪೂಜೆ; ಜಲಸಿರಿ ಪೂರ್ಣಗೊಂಡಲ್ಲಿ ದಿನದ 24 ತಾಸು ನೀರು: ಮೇಯರ್ ಮನೋಜ್

26/02/2025, 22:33

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ತುಂಬೆ ಕಿಂಡಿ ಅಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಸಮರ್ಪಣೆ ಮಾಡಿ ಗಂಗಾ ಪೂಜೆಯನ್ನು ಮಂಗಳೂರು ಮೇಯರ್ ಮನೋಜ್ ಕುಮಾರ್ ನೆರವೇರಿಸಿದರು.
ಮಂಗಳೂರು ಮಹಾನಗರಕ್ಕೆ ಮತ್ತು ಬಂಟ್ವಾಳ ‌ತಾಲೂಕಿನ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ನೇತ್ರಾವತಿ ನದಿ ಮಾತೆಗೆ ಸಮಾನ. ನದಿ ಪರಿಸರದ ಕೃಷಿಕರಿಗೆ ಅನ್ನದಾತೆಯಾಗಿದ್ದಾಳೆ. ನಿರಂತರವಾಗಿ ಹರಿದು ರೈತರ ಜೀವನಾಡಿಯಾಗಿದ್ದಾಳೆ.
ಸದ್ಯ 6 ಮೀಟರ್ ನೀರಿದ್ದು ನೀರಿನ ಕೊರತೆಯಾಗದು. ಎಡಿಬಿ 780 ಕೋಟಿ ವೆಚ್ಚದಲ್ಲಿ ಜಲಸಿರಿ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಂಡಲ್ಲಿ ದಿನದ 24 ಗಂಟೆಯೂ ಮಂಗಳೂರಿಗೆ ನೀರು ಪೂರೈಕೆಯಾಗಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದರು.
ಪಾಲಿಕೆ ವಿಪಕ್ಷ ನಾಯಕ‌ ಅನಿಲ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉಪಮೇಯರ್ ಭಾನುಮತಿ, ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್,ಪಾಲಿಕೆ‌ ಸಚೇತಕ ಪ್ರೇಮಾನಂದ ಶೆಟ್ಟಿ, ಜಯಾನಂದ‌ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು