3:29 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ತುಂಬೆ: ನೇತ್ರಾವತಿಗೆ ಬಾಗಿನ‌ ಅರ್ಪಣೆ, ಗಂಗಾ ಪೂಜೆ; ಜಲಸಿರಿ ಪೂರ್ಣಗೊಂಡಲ್ಲಿ ದಿನದ 24 ತಾಸು ನೀರು: ಮೇಯರ್ ಮನೋಜ್

26/02/2025, 22:33

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ತುಂಬೆ ಕಿಂಡಿ ಅಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಸಮರ್ಪಣೆ ಮಾಡಿ ಗಂಗಾ ಪೂಜೆಯನ್ನು ಮಂಗಳೂರು ಮೇಯರ್ ಮನೋಜ್ ಕುಮಾರ್ ನೆರವೇರಿಸಿದರು.
ಮಂಗಳೂರು ಮಹಾನಗರಕ್ಕೆ ಮತ್ತು ಬಂಟ್ವಾಳ ‌ತಾಲೂಕಿನ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ನೇತ್ರಾವತಿ ನದಿ ಮಾತೆಗೆ ಸಮಾನ. ನದಿ ಪರಿಸರದ ಕೃಷಿಕರಿಗೆ ಅನ್ನದಾತೆಯಾಗಿದ್ದಾಳೆ. ನಿರಂತರವಾಗಿ ಹರಿದು ರೈತರ ಜೀವನಾಡಿಯಾಗಿದ್ದಾಳೆ.
ಸದ್ಯ 6 ಮೀಟರ್ ನೀರಿದ್ದು ನೀರಿನ ಕೊರತೆಯಾಗದು. ಎಡಿಬಿ 780 ಕೋಟಿ ವೆಚ್ಚದಲ್ಲಿ ಜಲಸಿರಿ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಂಡಲ್ಲಿ ದಿನದ 24 ಗಂಟೆಯೂ ಮಂಗಳೂರಿಗೆ ನೀರು ಪೂರೈಕೆಯಾಗಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದರು.
ಪಾಲಿಕೆ ವಿಪಕ್ಷ ನಾಯಕ‌ ಅನಿಲ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉಪಮೇಯರ್ ಭಾನುಮತಿ, ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್,ಪಾಲಿಕೆ‌ ಸಚೇತಕ ಪ್ರೇಮಾನಂದ ಶೆಟ್ಟಿ, ಜಯಾನಂದ‌ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು