3:46 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಯುಪಿಎಸ್‍ಸಿ 2022ರಲ್ಲಿ ರಾಜ್ಯದ 26 ಮಂದಿ ಆಯ್ಕೆ: ಧೀ ಅಕಾಡೆಮಿಯಿಂದ ಟ್ರೈನಿಂಗ್ ಪಡೆದ 5 ಅಭ್ಯರ್ಥಿಗಳು ತೇರ್ಗಡೆ

23/05/2023, 22:32

ಬೆಂಗಳೂರು(reporterkarnataka.com): ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‍ಸಿ) 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಆಯ್ಕೆಯಾಗಿರುವ ಒಟ್ಟು 933 ಅಭ್ಯರ್ಥಿಗಳ ಪೈಕಿ ರಾಜ್ಯದ 26 ಅಭ್ಯರ್ಥಿಗಳಿದ್ದಾರೆ. ಮೊದಲ ಪ್ರಯತ್ನದಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿರುವ ಧೀ ಅಕಾಡಮಿ ಯಶಸ್ವಿಯಾಗಿದೆ.

ಈ ಅಕಾಡಮಿಯಿಂದ ಟ್ರೈನಿಂಗ್ ಮತ್ತು ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆ ಬಗ್ಗೆ ಸಲಹೆ ಪಡೆದ ಸೌರಭ್ ಎ ನರೇಂದ್ರ 198ನೇ ರ‍್ಯಾಂಕ್; ಪಿ ಶ್ರವಣ್ ಕುಮಾರ್ 222ನೇ ರ‍್ಯಾಂಕ್ ; ವಿಜಯಪುರ ಜಿಲ್ಲೆಯ ಸರೂರ ತಾಂಡದ ಶೃತಿ ಯರಗಟ್ಟಿ 362ನೇ ರ‍್ಯಾಂಕ್ ; ಮೈಸೂರಿನ ಪೂಜಾ ಮುಕುಂದ್ 390ನೇ ರ‍್ಯಾಂಕ್ ಮತ್ತು ಅಪೂರ್ವ ಮಂದಾ 646ನೇ ರ‍್ಯಾಂಕ್ ಪಡೆದು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
2022ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಗೆ ಧೀ ಅಕಾಡೆಮಿಯಲ್ಲಿ 200ಕ್ಕೂ ಹೆಚ್ಚು ಅಭ್ಯರ್ಥಿಗಳು ಟ್ರೈನಿಂಗ್ ಪಡೆದಿದ್ದರು ವಿಶೇಷ ಸಂಗತಿ ಎಂದರೆ ಸಂಸ್ಥೆಯ ಮೊದಲ ಬ್ಯಾಚ್‍ನಲ್ಲಿ ರಾಜ್ಯದ 30ಕ್ಕೂ ಹೆಚ್ಚು ಬಡತನ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿಯನ್ನು ನೀಡಿತ್ತು. ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆಗೆ ಬಗ್ಗೆ ಸಲಹೆ ಪಡೆದು ಯುಪಿಎಸ್‍ಸಿ 2022ರಲ್ಲಿ ಆಯ್ಕೆ ಆಗುವ ಮೂಲಕ ಸೌರಭ್ ಎ ನರೇಂದ್ರ, ಪಿ ಶ್ರವಣ್ ಕುಮಾರ್, ಶೃತಿ ಯರಗಟ್ಟಿ ಪೂಜಾ ಮುಕುಂದ್ ಮತ್ತು ಅಪೂರ್ವ ಮಂದಾ ರವರು ಸಂಸ್ಥೆ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿ ಕಾವ್ಯಾ ಅನಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು