8:13 PM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

ಯುಪಿಎಸ್‍ಸಿ 2022ರಲ್ಲಿ ರಾಜ್ಯದ 26 ಮಂದಿ ಆಯ್ಕೆ: ಧೀ ಅಕಾಡೆಮಿಯಿಂದ ಟ್ರೈನಿಂಗ್ ಪಡೆದ 5 ಅಭ್ಯರ್ಥಿಗಳು ತೇರ್ಗಡೆ

23/05/2023, 22:32

ಬೆಂಗಳೂರು(reporterkarnataka.com): ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‍ಸಿ) 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಆಯ್ಕೆಯಾಗಿರುವ ಒಟ್ಟು 933 ಅಭ್ಯರ್ಥಿಗಳ ಪೈಕಿ ರಾಜ್ಯದ 26 ಅಭ್ಯರ್ಥಿಗಳಿದ್ದಾರೆ. ಮೊದಲ ಪ್ರಯತ್ನದಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿರುವ ಧೀ ಅಕಾಡಮಿ ಯಶಸ್ವಿಯಾಗಿದೆ.

ಈ ಅಕಾಡಮಿಯಿಂದ ಟ್ರೈನಿಂಗ್ ಮತ್ತು ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆ ಬಗ್ಗೆ ಸಲಹೆ ಪಡೆದ ಸೌರಭ್ ಎ ನರೇಂದ್ರ 198ನೇ ರ‍್ಯಾಂಕ್; ಪಿ ಶ್ರವಣ್ ಕುಮಾರ್ 222ನೇ ರ‍್ಯಾಂಕ್ ; ವಿಜಯಪುರ ಜಿಲ್ಲೆಯ ಸರೂರ ತಾಂಡದ ಶೃತಿ ಯರಗಟ್ಟಿ 362ನೇ ರ‍್ಯಾಂಕ್ ; ಮೈಸೂರಿನ ಪೂಜಾ ಮುಕುಂದ್ 390ನೇ ರ‍್ಯಾಂಕ್ ಮತ್ತು ಅಪೂರ್ವ ಮಂದಾ 646ನೇ ರ‍್ಯಾಂಕ್ ಪಡೆದು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
2022ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಗೆ ಧೀ ಅಕಾಡೆಮಿಯಲ್ಲಿ 200ಕ್ಕೂ ಹೆಚ್ಚು ಅಭ್ಯರ್ಥಿಗಳು ಟ್ರೈನಿಂಗ್ ಪಡೆದಿದ್ದರು ವಿಶೇಷ ಸಂಗತಿ ಎಂದರೆ ಸಂಸ್ಥೆಯ ಮೊದಲ ಬ್ಯಾಚ್‍ನಲ್ಲಿ ರಾಜ್ಯದ 30ಕ್ಕೂ ಹೆಚ್ಚು ಬಡತನ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿಯನ್ನು ನೀಡಿತ್ತು. ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆಗೆ ಬಗ್ಗೆ ಸಲಹೆ ಪಡೆದು ಯುಪಿಎಸ್‍ಸಿ 2022ರಲ್ಲಿ ಆಯ್ಕೆ ಆಗುವ ಮೂಲಕ ಸೌರಭ್ ಎ ನರೇಂದ್ರ, ಪಿ ಶ್ರವಣ್ ಕುಮಾರ್, ಶೃತಿ ಯರಗಟ್ಟಿ ಪೂಜಾ ಮುಕುಂದ್ ಮತ್ತು ಅಪೂರ್ವ ಮಂದಾ ರವರು ಸಂಸ್ಥೆ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿ ಕಾವ್ಯಾ ಅನಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು