11:41 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಯುಪಿಎಸ್‍ಸಿ 2022ರಲ್ಲಿ ರಾಜ್ಯದ 26 ಮಂದಿ ಆಯ್ಕೆ: ಧೀ ಅಕಾಡೆಮಿಯಿಂದ ಟ್ರೈನಿಂಗ್ ಪಡೆದ 5 ಅಭ್ಯರ್ಥಿಗಳು ತೇರ್ಗಡೆ

23/05/2023, 22:32

ಬೆಂಗಳೂರು(reporterkarnataka.com): ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‍ಸಿ) 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಆಯ್ಕೆಯಾಗಿರುವ ಒಟ್ಟು 933 ಅಭ್ಯರ್ಥಿಗಳ ಪೈಕಿ ರಾಜ್ಯದ 26 ಅಭ್ಯರ್ಥಿಗಳಿದ್ದಾರೆ. ಮೊದಲ ಪ್ರಯತ್ನದಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿರುವ ಧೀ ಅಕಾಡಮಿ ಯಶಸ್ವಿಯಾಗಿದೆ.

ಈ ಅಕಾಡಮಿಯಿಂದ ಟ್ರೈನಿಂಗ್ ಮತ್ತು ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆ ಬಗ್ಗೆ ಸಲಹೆ ಪಡೆದ ಸೌರಭ್ ಎ ನರೇಂದ್ರ 198ನೇ ರ‍್ಯಾಂಕ್; ಪಿ ಶ್ರವಣ್ ಕುಮಾರ್ 222ನೇ ರ‍್ಯಾಂಕ್ ; ವಿಜಯಪುರ ಜಿಲ್ಲೆಯ ಸರೂರ ತಾಂಡದ ಶೃತಿ ಯರಗಟ್ಟಿ 362ನೇ ರ‍್ಯಾಂಕ್ ; ಮೈಸೂರಿನ ಪೂಜಾ ಮುಕುಂದ್ 390ನೇ ರ‍್ಯಾಂಕ್ ಮತ್ತು ಅಪೂರ್ವ ಮಂದಾ 646ನೇ ರ‍್ಯಾಂಕ್ ಪಡೆದು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
2022ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಗೆ ಧೀ ಅಕಾಡೆಮಿಯಲ್ಲಿ 200ಕ್ಕೂ ಹೆಚ್ಚು ಅಭ್ಯರ್ಥಿಗಳು ಟ್ರೈನಿಂಗ್ ಪಡೆದಿದ್ದರು ವಿಶೇಷ ಸಂಗತಿ ಎಂದರೆ ಸಂಸ್ಥೆಯ ಮೊದಲ ಬ್ಯಾಚ್‍ನಲ್ಲಿ ರಾಜ್ಯದ 30ಕ್ಕೂ ಹೆಚ್ಚು ಬಡತನ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿಯನ್ನು ನೀಡಿತ್ತು. ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆಗೆ ಬಗ್ಗೆ ಸಲಹೆ ಪಡೆದು ಯುಪಿಎಸ್‍ಸಿ 2022ರಲ್ಲಿ ಆಯ್ಕೆ ಆಗುವ ಮೂಲಕ ಸೌರಭ್ ಎ ನರೇಂದ್ರ, ಪಿ ಶ್ರವಣ್ ಕುಮಾರ್, ಶೃತಿ ಯರಗಟ್ಟಿ ಪೂಜಾ ಮುಕುಂದ್ ಮತ್ತು ಅಪೂರ್ವ ಮಂದಾ ರವರು ಸಂಸ್ಥೆ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿ ಕಾವ್ಯಾ ಅನಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು