11:02 AM Saturday1 - August 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಯುಪಿಎಸ್‍ಸಿ 2022ರಲ್ಲಿ ರಾಜ್ಯದ 26 ಮಂದಿ ಆಯ್ಕೆ: ಧೀ ಅಕಾಡೆಮಿಯಿಂದ ಟ್ರೈನಿಂಗ್ ಪಡೆದ 5 ಅಭ್ಯರ್ಥಿಗಳು ತೇರ್ಗಡೆ

23/05/2023, 22:32

ಬೆಂಗಳೂರು(reporterkarnataka.com): ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‍ಸಿ) 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಆಯ್ಕೆಯಾಗಿರುವ ಒಟ್ಟು 933 ಅಭ್ಯರ್ಥಿಗಳ ಪೈಕಿ ರಾಜ್ಯದ 26 ಅಭ್ಯರ್ಥಿಗಳಿದ್ದಾರೆ. ಮೊದಲ ಪ್ರಯತ್ನದಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿರುವ ಧೀ ಅಕಾಡಮಿ ಯಶಸ್ವಿಯಾಗಿದೆ.

ಈ ಅಕಾಡಮಿಯಿಂದ ಟ್ರೈನಿಂಗ್ ಮತ್ತು ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆ ಬಗ್ಗೆ ಸಲಹೆ ಪಡೆದ ಸೌರಭ್ ಎ ನರೇಂದ್ರ 198ನೇ ರ‍್ಯಾಂಕ್; ಪಿ ಶ್ರವಣ್ ಕುಮಾರ್ 222ನೇ ರ‍್ಯಾಂಕ್ ; ವಿಜಯಪುರ ಜಿಲ್ಲೆಯ ಸರೂರ ತಾಂಡದ ಶೃತಿ ಯರಗಟ್ಟಿ 362ನೇ ರ‍್ಯಾಂಕ್ ; ಮೈಸೂರಿನ ಪೂಜಾ ಮುಕುಂದ್ 390ನೇ ರ‍್ಯಾಂಕ್ ಮತ್ತು ಅಪೂರ್ವ ಮಂದಾ 646ನೇ ರ‍್ಯಾಂಕ್ ಪಡೆದು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
2022ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಗೆ ಧೀ ಅಕಾಡೆಮಿಯಲ್ಲಿ 200ಕ್ಕೂ ಹೆಚ್ಚು ಅಭ್ಯರ್ಥಿಗಳು ಟ್ರೈನಿಂಗ್ ಪಡೆದಿದ್ದರು ವಿಶೇಷ ಸಂಗತಿ ಎಂದರೆ ಸಂಸ್ಥೆಯ ಮೊದಲ ಬ್ಯಾಚ್‍ನಲ್ಲಿ ರಾಜ್ಯದ 30ಕ್ಕೂ ಹೆಚ್ಚು ಬಡತನ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿಯನ್ನು ನೀಡಿತ್ತು. ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆಗೆ ಬಗ್ಗೆ ಸಲಹೆ ಪಡೆದು ಯುಪಿಎಸ್‍ಸಿ 2022ರಲ್ಲಿ ಆಯ್ಕೆ ಆಗುವ ಮೂಲಕ ಸೌರಭ್ ಎ ನರೇಂದ್ರ, ಪಿ ಶ್ರವಣ್ ಕುಮಾರ್, ಶೃತಿ ಯರಗಟ್ಟಿ ಪೂಜಾ ಮುಕುಂದ್ ಮತ್ತು ಅಪೂರ್ವ ಮಂದಾ ರವರು ಸಂಸ್ಥೆ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿ ಕಾವ್ಯಾ ಅನಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು