2:15 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಯುಪಿಎಸ್‍ಸಿ 2022ರಲ್ಲಿ ರಾಜ್ಯದ 26 ಮಂದಿ ಆಯ್ಕೆ: ಧೀ ಅಕಾಡೆಮಿಯಿಂದ ಟ್ರೈನಿಂಗ್ ಪಡೆದ 5 ಅಭ್ಯರ್ಥಿಗಳು ತೇರ್ಗಡೆ

23/05/2023, 22:32

ಬೆಂಗಳೂರು(reporterkarnataka.com): ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‍ಸಿ) 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಆಯ್ಕೆಯಾಗಿರುವ ಒಟ್ಟು 933 ಅಭ್ಯರ್ಥಿಗಳ ಪೈಕಿ ರಾಜ್ಯದ 26 ಅಭ್ಯರ್ಥಿಗಳಿದ್ದಾರೆ. ಮೊದಲ ಪ್ರಯತ್ನದಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿರುವ ಧೀ ಅಕಾಡಮಿ ಯಶಸ್ವಿಯಾಗಿದೆ.

ಈ ಅಕಾಡಮಿಯಿಂದ ಟ್ರೈನಿಂಗ್ ಮತ್ತು ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆ ಬಗ್ಗೆ ಸಲಹೆ ಪಡೆದ ಸೌರಭ್ ಎ ನರೇಂದ್ರ 198ನೇ ರ‍್ಯಾಂಕ್; ಪಿ ಶ್ರವಣ್ ಕುಮಾರ್ 222ನೇ ರ‍್ಯಾಂಕ್ ; ವಿಜಯಪುರ ಜಿಲ್ಲೆಯ ಸರೂರ ತಾಂಡದ ಶೃತಿ ಯರಗಟ್ಟಿ 362ನೇ ರ‍್ಯಾಂಕ್ ; ಮೈಸೂರಿನ ಪೂಜಾ ಮುಕುಂದ್ 390ನೇ ರ‍್ಯಾಂಕ್ ಮತ್ತು ಅಪೂರ್ವ ಮಂದಾ 646ನೇ ರ‍್ಯಾಂಕ್ ಪಡೆದು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
2022ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಗೆ ಧೀ ಅಕಾಡೆಮಿಯಲ್ಲಿ 200ಕ್ಕೂ ಹೆಚ್ಚು ಅಭ್ಯರ್ಥಿಗಳು ಟ್ರೈನಿಂಗ್ ಪಡೆದಿದ್ದರು ವಿಶೇಷ ಸಂಗತಿ ಎಂದರೆ ಸಂಸ್ಥೆಯ ಮೊದಲ ಬ್ಯಾಚ್‍ನಲ್ಲಿ ರಾಜ್ಯದ 30ಕ್ಕೂ ಹೆಚ್ಚು ಬಡತನ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿಯನ್ನು ನೀಡಿತ್ತು. ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆಗೆ ಬಗ್ಗೆ ಸಲಹೆ ಪಡೆದು ಯುಪಿಎಸ್‍ಸಿ 2022ರಲ್ಲಿ ಆಯ್ಕೆ ಆಗುವ ಮೂಲಕ ಸೌರಭ್ ಎ ನರೇಂದ್ರ, ಪಿ ಶ್ರವಣ್ ಕುಮಾರ್, ಶೃತಿ ಯರಗಟ್ಟಿ ಪೂಜಾ ಮುಕುಂದ್ ಮತ್ತು ಅಪೂರ್ವ ಮಂದಾ ರವರು ಸಂಸ್ಥೆ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿ ಕಾವ್ಯಾ ಅನಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು