12:37 AM Thursday29 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಯುಪಿಎಸ್‍ಸಿ 2022ರಲ್ಲಿ ರಾಜ್ಯದ 26 ಮಂದಿ ಆಯ್ಕೆ: ಧೀ ಅಕಾಡೆಮಿಯಿಂದ ಟ್ರೈನಿಂಗ್ ಪಡೆದ 5 ಅಭ್ಯರ್ಥಿಗಳು ತೇರ್ಗಡೆ

23/05/2023, 22:32

ಬೆಂಗಳೂರು(reporterkarnataka.com): ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‍ಸಿ) 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಆಯ್ಕೆಯಾಗಿರುವ ಒಟ್ಟು 933 ಅಭ್ಯರ್ಥಿಗಳ ಪೈಕಿ ರಾಜ್ಯದ 26 ಅಭ್ಯರ್ಥಿಗಳಿದ್ದಾರೆ. ಮೊದಲ ಪ್ರಯತ್ನದಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿರುವ ಧೀ ಅಕಾಡಮಿ ಯಶಸ್ವಿಯಾಗಿದೆ.

ಈ ಅಕಾಡಮಿಯಿಂದ ಟ್ರೈನಿಂಗ್ ಮತ್ತು ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆ ಬಗ್ಗೆ ಸಲಹೆ ಪಡೆದ ಸೌರಭ್ ಎ ನರೇಂದ್ರ 198ನೇ ರ‍್ಯಾಂಕ್; ಪಿ ಶ್ರವಣ್ ಕುಮಾರ್ 222ನೇ ರ‍್ಯಾಂಕ್ ; ವಿಜಯಪುರ ಜಿಲ್ಲೆಯ ಸರೂರ ತಾಂಡದ ಶೃತಿ ಯರಗಟ್ಟಿ 362ನೇ ರ‍್ಯಾಂಕ್ ; ಮೈಸೂರಿನ ಪೂಜಾ ಮುಕುಂದ್ 390ನೇ ರ‍್ಯಾಂಕ್ ಮತ್ತು ಅಪೂರ್ವ ಮಂದಾ 646ನೇ ರ‍್ಯಾಂಕ್ ಪಡೆದು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
2022ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಗೆ ಧೀ ಅಕಾಡೆಮಿಯಲ್ಲಿ 200ಕ್ಕೂ ಹೆಚ್ಚು ಅಭ್ಯರ್ಥಿಗಳು ಟ್ರೈನಿಂಗ್ ಪಡೆದಿದ್ದರು ವಿಶೇಷ ಸಂಗತಿ ಎಂದರೆ ಸಂಸ್ಥೆಯ ಮೊದಲ ಬ್ಯಾಚ್‍ನಲ್ಲಿ ರಾಜ್ಯದ 30ಕ್ಕೂ ಹೆಚ್ಚು ಬಡತನ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿಯನ್ನು ನೀಡಿತ್ತು. ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆಗೆ ಬಗ್ಗೆ ಸಲಹೆ ಪಡೆದು ಯುಪಿಎಸ್‍ಸಿ 2022ರಲ್ಲಿ ಆಯ್ಕೆ ಆಗುವ ಮೂಲಕ ಸೌರಭ್ ಎ ನರೇಂದ್ರ, ಪಿ ಶ್ರವಣ್ ಕುಮಾರ್, ಶೃತಿ ಯರಗಟ್ಟಿ ಪೂಜಾ ಮುಕುಂದ್ ಮತ್ತು ಅಪೂರ್ವ ಮಂದಾ ರವರು ಸಂಸ್ಥೆ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿ ಕಾವ್ಯಾ ಅನಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು