7:03 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಯುಪಿಎಸ್‍ಸಿ 2022ರಲ್ಲಿ ರಾಜ್ಯದ 26 ಮಂದಿ ಆಯ್ಕೆ: ಧೀ ಅಕಾಡೆಮಿಯಿಂದ ಟ್ರೈನಿಂಗ್ ಪಡೆದ 5 ಅಭ್ಯರ್ಥಿಗಳು ತೇರ್ಗಡೆ

23/05/2023, 22:32

ಬೆಂಗಳೂರು(reporterkarnataka.com): ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‍ಸಿ) 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಆಯ್ಕೆಯಾಗಿರುವ ಒಟ್ಟು 933 ಅಭ್ಯರ್ಥಿಗಳ ಪೈಕಿ ರಾಜ್ಯದ 26 ಅಭ್ಯರ್ಥಿಗಳಿದ್ದಾರೆ. ಮೊದಲ ಪ್ರಯತ್ನದಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿರುವ ಧೀ ಅಕಾಡಮಿ ಯಶಸ್ವಿಯಾಗಿದೆ.

ಈ ಅಕಾಡಮಿಯಿಂದ ಟ್ರೈನಿಂಗ್ ಮತ್ತು ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆ ಬಗ್ಗೆ ಸಲಹೆ ಪಡೆದ ಸೌರಭ್ ಎ ನರೇಂದ್ರ 198ನೇ ರ‍್ಯಾಂಕ್; ಪಿ ಶ್ರವಣ್ ಕುಮಾರ್ 222ನೇ ರ‍್ಯಾಂಕ್ ; ವಿಜಯಪುರ ಜಿಲ್ಲೆಯ ಸರೂರ ತಾಂಡದ ಶೃತಿ ಯರಗಟ್ಟಿ 362ನೇ ರ‍್ಯಾಂಕ್ ; ಮೈಸೂರಿನ ಪೂಜಾ ಮುಕುಂದ್ 390ನೇ ರ‍್ಯಾಂಕ್ ಮತ್ತು ಅಪೂರ್ವ ಮಂದಾ 646ನೇ ರ‍್ಯಾಂಕ್ ಪಡೆದು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
2022ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಗೆ ಧೀ ಅಕಾಡೆಮಿಯಲ್ಲಿ 200ಕ್ಕೂ ಹೆಚ್ಚು ಅಭ್ಯರ್ಥಿಗಳು ಟ್ರೈನಿಂಗ್ ಪಡೆದಿದ್ದರು ವಿಶೇಷ ಸಂಗತಿ ಎಂದರೆ ಸಂಸ್ಥೆಯ ಮೊದಲ ಬ್ಯಾಚ್‍ನಲ್ಲಿ ರಾಜ್ಯದ 30ಕ್ಕೂ ಹೆಚ್ಚು ಬಡತನ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿಯನ್ನು ನೀಡಿತ್ತು. ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆಗೆ ಬಗ್ಗೆ ಸಲಹೆ ಪಡೆದು ಯುಪಿಎಸ್‍ಸಿ 2022ರಲ್ಲಿ ಆಯ್ಕೆ ಆಗುವ ಮೂಲಕ ಸೌರಭ್ ಎ ನರೇಂದ್ರ, ಪಿ ಶ್ರವಣ್ ಕುಮಾರ್, ಶೃತಿ ಯರಗಟ್ಟಿ ಪೂಜಾ ಮುಕುಂದ್ ಮತ್ತು ಅಪೂರ್ವ ಮಂದಾ ರವರು ಸಂಸ್ಥೆ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿ ಕಾವ್ಯಾ ಅನಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು