12:29 AM Thursday18 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಯುಪಿಎಸ್‍ಸಿ 2022ರಲ್ಲಿ ರಾಜ್ಯದ 26 ಮಂದಿ ಆಯ್ಕೆ: ಧೀ ಅಕಾಡೆಮಿಯಿಂದ ಟ್ರೈನಿಂಗ್ ಪಡೆದ 5 ಅಭ್ಯರ್ಥಿಗಳು ತೇರ್ಗಡೆ

23/05/2023, 22:32

ಬೆಂಗಳೂರು(reporterkarnataka.com): ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‍ಸಿ) 2022ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಆಯ್ಕೆಯಾಗಿರುವ ಒಟ್ಟು 933 ಅಭ್ಯರ್ಥಿಗಳ ಪೈಕಿ ರಾಜ್ಯದ 26 ಅಭ್ಯರ್ಥಿಗಳಿದ್ದಾರೆ. ಮೊದಲ ಪ್ರಯತ್ನದಲ್ಲಿ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿರುವ ಧೀ ಅಕಾಡಮಿ ಯಶಸ್ವಿಯಾಗಿದೆ.

ಈ ಅಕಾಡಮಿಯಿಂದ ಟ್ರೈನಿಂಗ್ ಮತ್ತು ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆ ಬಗ್ಗೆ ಸಲಹೆ ಪಡೆದ ಸೌರಭ್ ಎ ನರೇಂದ್ರ 198ನೇ ರ‍್ಯಾಂಕ್; ಪಿ ಶ್ರವಣ್ ಕುಮಾರ್ 222ನೇ ರ‍್ಯಾಂಕ್ ; ವಿಜಯಪುರ ಜಿಲ್ಲೆಯ ಸರೂರ ತಾಂಡದ ಶೃತಿ ಯರಗಟ್ಟಿ 362ನೇ ರ‍್ಯಾಂಕ್ ; ಮೈಸೂರಿನ ಪೂಜಾ ಮುಕುಂದ್ 390ನೇ ರ‍್ಯಾಂಕ್ ಮತ್ತು ಅಪೂರ್ವ ಮಂದಾ 646ನೇ ರ‍್ಯಾಂಕ್ ಪಡೆದು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ.
2022ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಗೆ ಧೀ ಅಕಾಡೆಮಿಯಲ್ಲಿ 200ಕ್ಕೂ ಹೆಚ್ಚು ಅಭ್ಯರ್ಥಿಗಳು ಟ್ರೈನಿಂಗ್ ಪಡೆದಿದ್ದರು ವಿಶೇಷ ಸಂಗತಿ ಎಂದರೆ ಸಂಸ್ಥೆಯ ಮೊದಲ ಬ್ಯಾಚ್‍ನಲ್ಲಿ ರಾಜ್ಯದ 30ಕ್ಕೂ ಹೆಚ್ಚು ಬಡತನ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿಯನ್ನು ನೀಡಿತ್ತು. ಪರೀಕ್ಷೆ ತಯಾರಿಗೆ ಬೇಕಾದ ಪೂರಕ ಚಟುವಟಿಕೆಗೆ ಬಗ್ಗೆ ಸಲಹೆ ಪಡೆದು ಯುಪಿಎಸ್‍ಸಿ 2022ರಲ್ಲಿ ಆಯ್ಕೆ ಆಗುವ ಮೂಲಕ ಸೌರಭ್ ಎ ನರೇಂದ್ರ, ಪಿ ಶ್ರವಣ್ ಕುಮಾರ್, ಶೃತಿ ಯರಗಟ್ಟಿ ಪೂಜಾ ಮುಕುಂದ್ ಮತ್ತು ಅಪೂರ್ವ ಮಂದಾ ರವರು ಸಂಸ್ಥೆ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿ ಕಾವ್ಯಾ ಅನಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು