ಇತ್ತೀಚಿನ ಸುದ್ದಿ
ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ: ಪ್ರತಿಭಟನೆ ಕೈ ಬಿಡಲು ವೈದ್ಯರ ನಿರ್ಧಾರ
August 23, 2020, 6:54 AM

ಬೆಂಗಳೂರು(reporterkarnataka news: ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಕೈ ಬಿಡಲು ಸರ್ಕಾರಿ ವೈದ್ಯರು ತೀರ್ಮಾನಿಸಿದ್ದಾರೆ. ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣ ಖಂಡಿಸಿ ಕಳೆದ ನಾಲ್ಕು ದಿನಗಳಿಂದ ವೈದ್ಯರು ಪ್ರತಿಭಟನೆಯ ಹಾದಿ ಹಿಡಿದಿದ್ದರು. ಸರ್ಕಾರ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಿದೆ. ಈ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರಿ ವೈದ್ಯರ ಸಂಘಟನೆ ಪದಾಧಿಕಾರಿಗಳು ಘೋಷಿಸಿದ್ದಾರೆ.
ಆತ್ಮಹತ್ಯೆಗೆ ಐಎಎಸ್ ಅಧಿಕಾರಿ ಹೇರಿದ ಒತ್ತಡವೇ ಕಾರಣ ಎಂದು ವೈದ್ಯರು ಆರೋಪಿಸಿದ್ದರು. ಈ ಮಧ್ಯೆ ಜಿಲ್ಲಾಧಿಕಾರಿ ಜತೆ ಆತ್ಮಹತ್ಯೆಗೆ ಶರಣಾದ ವೈದ್ಯ ಡಾ. ನಾಗೇಂದ್ರ ಅವರು ನಡೆಸಿದ್ದರೆನ್ನಲ್ಲಾದ ಆಡಿಯೋ ವೈರಲ್ ಆಗಿದೆ.