6:22 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ವೈಕುಂಠ ಏಕಾದಶಿ: ನಂಜನಗೂಡು ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ವೈಭವ; ಸಾವಿರಾರು ಭಕ್ತರಿಂದ ದೇವರ ದರ್ಶನ

23/12/2023, 19:26

ಮೋಹನ್ ನಂಜನಗೂಡು ಮೈಸೂರು

info.reporterarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿಯ ಸದ್ಗುರು ಶ್ರೀ ಮಹದೇವ ತಾತ ಬಡಾವಣೆಯಲ್ಲಿ ವಿಜಯಲಕ್ಷ್ಮಿ ನಾರಾಯಣ ರೆಡ್ಡಿ ದಂಪತಿ ನಿರ್ಮಿಸಿರುವ ನೂತನ ದೇವಾಲಯ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದ ವತಿಯಿಂದ ನಿನ್ನೆ ರಾತ್ರಿಯಿಂದಲೇ ಹೋಮ ಹವನ ವಿಶೇಷ ಪೂಜೆಗಳು ನಡೆದು ಇಂದು ಬೆಳಗ್ಗೆ ಎಂಟು ಗಂಟೆಯಿಂದ ಭಕ್ತರಿಗೆ ವೈಕುಂಠ ಮಹಾದ್ವಾರ ಹಾಗೂ ಪುಣ್ಯ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.
ಹುಲ್ಲಹಳ್ಳಿಯು ಸೇರಿದಂತೆ ಸುತ್ತಮುತ್ತಲ ಸಾವಿರಾರು ಭಕ್ತರು ದೇವಾಲಯಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತು ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಭಕ್ತಿ ಭಾವ ಮೆರೆದರು.
ಇಂದು ವಿಷ್ಣುವಿಗೆ ಪ್ರಿಯವಾದ ದಿನವಾದ್ದರಿಂದ ದೇವಾಲಯದ ವೈಕುಂಠ ದ್ವಾರದ ಮೂಲಕ ಬಂದು ದೇವರ ದರ್ಶನ ಪಡೆದರೆ ಪುಣ್ಯಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿಂದ ಸಾವಿರಾರು ಭಕ್ತರು ಬೆಳಿಗ್ಗೆಯಿಂದ ಸಂಜೆವರೆಗೂ ವೈಕುಂಠ ದ್ವಾರ ಪ್ರವೇಶಿಸಿ ಬಂದು ಶ್ರೀ ಅಲಮೇಲಮ್ಮ ಹಾಗೂ ಶ್ರೀ ವೆಂಕಟೇಶ್ವರಸ್ವಾಮಿ, ಗಣಪತಿ ಹಾಗೂ ಆಂಜನೇಯ ಸ್ವಾಮಿಯ ದರ್ಶನ ಪಡೆದು ಪುಳಕಿತರಾದರು. ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿ ಮತ್ತು ಅಲಮೇಲ ಮಂಗಮ್ಮನವರ ಮೂರ್ತಿಗಳನ್ನು ವಿಶೇಷವಾಗಿ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.


ಇದೇ ಸಂದರ್ಭ ದೇವಾಲಯಕ್ಕೆ ಬಂದ ಎಲ್ಲಾ ಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಾಲಯದ ಟ್ರಸ್ಟಿ ಶ್ರೀನಿವಾಸ ರೆಡ್ಡಿ ಮಾತನಾಡಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ವೈಕುಂಠ ಏಕಾದಶಿ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು