3:28 AM Tuesday14 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ವೈಕುಂಠ ಏಕಾದಶಿ: ನಂಜನಗೂಡು ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ವೈಭವ; ಸಾವಿರಾರು ಭಕ್ತರಿಂದ ದೇವರ ದರ್ಶನ

23/12/2023, 19:26

ಮೋಹನ್ ನಂಜನಗೂಡು ಮೈಸೂರು

info.reporterarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿಯ ಸದ್ಗುರು ಶ್ರೀ ಮಹದೇವ ತಾತ ಬಡಾವಣೆಯಲ್ಲಿ ವಿಜಯಲಕ್ಷ್ಮಿ ನಾರಾಯಣ ರೆಡ್ಡಿ ದಂಪತಿ ನಿರ್ಮಿಸಿರುವ ನೂತನ ದೇವಾಲಯ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದ ವತಿಯಿಂದ ನಿನ್ನೆ ರಾತ್ರಿಯಿಂದಲೇ ಹೋಮ ಹವನ ವಿಶೇಷ ಪೂಜೆಗಳು ನಡೆದು ಇಂದು ಬೆಳಗ್ಗೆ ಎಂಟು ಗಂಟೆಯಿಂದ ಭಕ್ತರಿಗೆ ವೈಕುಂಠ ಮಹಾದ್ವಾರ ಹಾಗೂ ಪುಣ್ಯ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.
ಹುಲ್ಲಹಳ್ಳಿಯು ಸೇರಿದಂತೆ ಸುತ್ತಮುತ್ತಲ ಸಾವಿರಾರು ಭಕ್ತರು ದೇವಾಲಯಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತು ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಭಕ್ತಿ ಭಾವ ಮೆರೆದರು.
ಇಂದು ವಿಷ್ಣುವಿಗೆ ಪ್ರಿಯವಾದ ದಿನವಾದ್ದರಿಂದ ದೇವಾಲಯದ ವೈಕುಂಠ ದ್ವಾರದ ಮೂಲಕ ಬಂದು ದೇವರ ದರ್ಶನ ಪಡೆದರೆ ಪುಣ್ಯಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿಂದ ಸಾವಿರಾರು ಭಕ್ತರು ಬೆಳಿಗ್ಗೆಯಿಂದ ಸಂಜೆವರೆಗೂ ವೈಕುಂಠ ದ್ವಾರ ಪ್ರವೇಶಿಸಿ ಬಂದು ಶ್ರೀ ಅಲಮೇಲಮ್ಮ ಹಾಗೂ ಶ್ರೀ ವೆಂಕಟೇಶ್ವರಸ್ವಾಮಿ, ಗಣಪತಿ ಹಾಗೂ ಆಂಜನೇಯ ಸ್ವಾಮಿಯ ದರ್ಶನ ಪಡೆದು ಪುಳಕಿತರಾದರು. ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿ ಮತ್ತು ಅಲಮೇಲ ಮಂಗಮ್ಮನವರ ಮೂರ್ತಿಗಳನ್ನು ವಿಶೇಷವಾಗಿ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.


ಇದೇ ಸಂದರ್ಭ ದೇವಾಲಯಕ್ಕೆ ಬಂದ ಎಲ್ಲಾ ಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಾಲಯದ ಟ್ರಸ್ಟಿ ಶ್ರೀನಿವಾಸ ರೆಡ್ಡಿ ಮಾತನಾಡಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ವೈಕುಂಠ ಏಕಾದಶಿ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು