2:49 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ವೈಕುಂಠ ಏಕಾದಶಿ: ನಂಜನಗೂಡು ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ವೈಭವ; ಸಾವಿರಾರು ಭಕ್ತರಿಂದ ದೇವರ ದರ್ಶನ

23/12/2023, 19:26

ಮೋಹನ್ ನಂಜನಗೂಡು ಮೈಸೂರು

info.reporterarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿಯ ಸದ್ಗುರು ಶ್ರೀ ಮಹದೇವ ತಾತ ಬಡಾವಣೆಯಲ್ಲಿ ವಿಜಯಲಕ್ಷ್ಮಿ ನಾರಾಯಣ ರೆಡ್ಡಿ ದಂಪತಿ ನಿರ್ಮಿಸಿರುವ ನೂತನ ದೇವಾಲಯ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದ ವತಿಯಿಂದ ನಿನ್ನೆ ರಾತ್ರಿಯಿಂದಲೇ ಹೋಮ ಹವನ ವಿಶೇಷ ಪೂಜೆಗಳು ನಡೆದು ಇಂದು ಬೆಳಗ್ಗೆ ಎಂಟು ಗಂಟೆಯಿಂದ ಭಕ್ತರಿಗೆ ವೈಕುಂಠ ಮಹಾದ್ವಾರ ಹಾಗೂ ಪುಣ್ಯ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.
ಹುಲ್ಲಹಳ್ಳಿಯು ಸೇರಿದಂತೆ ಸುತ್ತಮುತ್ತಲ ಸಾವಿರಾರು ಭಕ್ತರು ದೇವಾಲಯಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತು ಶ್ರೀ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಭಕ್ತಿ ಭಾವ ಮೆರೆದರು.
ಇಂದು ವಿಷ್ಣುವಿಗೆ ಪ್ರಿಯವಾದ ದಿನವಾದ್ದರಿಂದ ದೇವಾಲಯದ ವೈಕುಂಠ ದ್ವಾರದ ಮೂಲಕ ಬಂದು ದೇವರ ದರ್ಶನ ಪಡೆದರೆ ಪುಣ್ಯಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿಂದ ಸಾವಿರಾರು ಭಕ್ತರು ಬೆಳಿಗ್ಗೆಯಿಂದ ಸಂಜೆವರೆಗೂ ವೈಕುಂಠ ದ್ವಾರ ಪ್ರವೇಶಿಸಿ ಬಂದು ಶ್ರೀ ಅಲಮೇಲಮ್ಮ ಹಾಗೂ ಶ್ರೀ ವೆಂಕಟೇಶ್ವರಸ್ವಾಮಿ, ಗಣಪತಿ ಹಾಗೂ ಆಂಜನೇಯ ಸ್ವಾಮಿಯ ದರ್ಶನ ಪಡೆದು ಪುಳಕಿತರಾದರು. ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿ ಮತ್ತು ಅಲಮೇಲ ಮಂಗಮ್ಮನವರ ಮೂರ್ತಿಗಳನ್ನು ವಿಶೇಷವಾಗಿ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.


ಇದೇ ಸಂದರ್ಭ ದೇವಾಲಯಕ್ಕೆ ಬಂದ ಎಲ್ಲಾ ಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಾಲಯದ ಟ್ರಸ್ಟಿ ಶ್ರೀನಿವಾಸ ರೆಡ್ಡಿ ಮಾತನಾಡಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ವೈಕುಂಠ ಏಕಾದಶಿ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು