4:16 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ವರದಕ್ಷಿಣೆ ಕಿರುಕುಳ: ಗೃಹಿಣಿ ಅತ್ಮಹತ್ಯೆಗೆ ಶರಣು; ಗಂಡ, ಅತ್ತೆ, ಮಾವ ವಿರುದ್ಧ ಎಫ್ ಐಆರ್

20/08/2024, 12:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ
ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮೃತ ದುರ್ದೈವಿಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಮೃತಳಿಗೆ ಎರಡೂವರೆ ವರ್ಷದ ಒಂದು ಗುಂಡು ಮಗುವಿದೆ.

ಕಳೆದ 4 ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಜೊತೆ ಅವರ ವಿವಾಹವಾಗಿತ್ತು.
ನಿನ್ನೆ ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಸುಭಿಕ್ಷಾ ಶರಣಾಗಿದ್ದಾರೆ.
ತಹಶೀಲ್ದಾರ್ ಆಗಮಿಸದ ಹಿನ್ನೆಲೆ ಮೃತದೇಹವನ್ನ ಪೊಲೀಸರು ಕೆಳಗಿಳಿಸಲಿಲ್ಲ.
7 ವರ್ಷದ ಒಳಗೆ ಗೃಹಿಣಿ ಆತ್ಮಹತ್ಯೆಗೆ ಶರಣಾದ್ರೆ ತಹಶೀಲ್ದಾರ್ ರಿಂದ ಸ್ಪಾಟ್ ಮಹಜರ್ ಆಗಬೇಕಿದೆ.
ತಹಶೀಲ್ದಾರ್ ಆಗಮನದ ಬಳಿಕ ಮೃತದೇಹ ಪೊಲೀಸರು, ಕುಟುಂಬಸ್ಥರು ಕೆಳಗಿಳಿಸಿದ್ದಾರೆ.
ಮೃತಳ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.ಗಂಡ ಪ್ರವೀಣ್, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು