9:37 PM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ವರದಕ್ಷಿಣೆ ಕಿರುಕುಳ: ಗೃಹಿಣಿ ಅತ್ಮಹತ್ಯೆಗೆ ಶರಣು; ಗಂಡ, ಅತ್ತೆ, ಮಾವ ವಿರುದ್ಧ ಎಫ್ ಐಆರ್

20/08/2024, 12:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ
ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮೃತ ದುರ್ದೈವಿಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಮೃತಳಿಗೆ ಎರಡೂವರೆ ವರ್ಷದ ಒಂದು ಗುಂಡು ಮಗುವಿದೆ.

ಕಳೆದ 4 ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಜೊತೆ ಅವರ ವಿವಾಹವಾಗಿತ್ತು.
ನಿನ್ನೆ ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಸುಭಿಕ್ಷಾ ಶರಣಾಗಿದ್ದಾರೆ.
ತಹಶೀಲ್ದಾರ್ ಆಗಮಿಸದ ಹಿನ್ನೆಲೆ ಮೃತದೇಹವನ್ನ ಪೊಲೀಸರು ಕೆಳಗಿಳಿಸಲಿಲ್ಲ.
7 ವರ್ಷದ ಒಳಗೆ ಗೃಹಿಣಿ ಆತ್ಮಹತ್ಯೆಗೆ ಶರಣಾದ್ರೆ ತಹಶೀಲ್ದಾರ್ ರಿಂದ ಸ್ಪಾಟ್ ಮಹಜರ್ ಆಗಬೇಕಿದೆ.
ತಹಶೀಲ್ದಾರ್ ಆಗಮನದ ಬಳಿಕ ಮೃತದೇಹ ಪೊಲೀಸರು, ಕುಟುಂಬಸ್ಥರು ಕೆಳಗಿಳಿಸಿದ್ದಾರೆ.
ಮೃತಳ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.ಗಂಡ ಪ್ರವೀಣ್, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು