11:00 PM Tuesday17 - March 2026
ಬ್ರೇಕಿಂಗ್ ನ್ಯೂಸ್
ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ…

ಇತ್ತೀಚಿನ ಸುದ್ದಿ

ವರದಕ್ಷಿಣೆ ಕಿರುಕುಳ: ಗೃಹಿಣಿ ಅತ್ಮಹತ್ಯೆಗೆ ಶರಣು; ಗಂಡ, ಅತ್ತೆ, ಮಾವ ವಿರುದ್ಧ ಎಫ್ ಐಆರ್

20/08/2024, 12:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ
ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮೃತ ದುರ್ದೈವಿಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಮೃತಳಿಗೆ ಎರಡೂವರೆ ವರ್ಷದ ಒಂದು ಗುಂಡು ಮಗುವಿದೆ.

ಕಳೆದ 4 ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಜೊತೆ ಅವರ ವಿವಾಹವಾಗಿತ್ತು.
ನಿನ್ನೆ ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಸುಭಿಕ್ಷಾ ಶರಣಾಗಿದ್ದಾರೆ.
ತಹಶೀಲ್ದಾರ್ ಆಗಮಿಸದ ಹಿನ್ನೆಲೆ ಮೃತದೇಹವನ್ನ ಪೊಲೀಸರು ಕೆಳಗಿಳಿಸಲಿಲ್ಲ.
7 ವರ್ಷದ ಒಳಗೆ ಗೃಹಿಣಿ ಆತ್ಮಹತ್ಯೆಗೆ ಶರಣಾದ್ರೆ ತಹಶೀಲ್ದಾರ್ ರಿಂದ ಸ್ಪಾಟ್ ಮಹಜರ್ ಆಗಬೇಕಿದೆ.
ತಹಶೀಲ್ದಾರ್ ಆಗಮನದ ಬಳಿಕ ಮೃತದೇಹ ಪೊಲೀಸರು, ಕುಟುಂಬಸ್ಥರು ಕೆಳಗಿಳಿಸಿದ್ದಾರೆ.
ಮೃತಳ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.ಗಂಡ ಪ್ರವೀಣ್, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು