10:10 PM Tuesday11 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ವರದಕ್ಷಿಣೆ ಕಿರುಕುಳ: ಗೃಹಿಣಿ ಅತ್ಮಹತ್ಯೆಗೆ ಶರಣು; ಗಂಡ, ಅತ್ತೆ, ಮಾವ ವಿರುದ್ಧ ಎಫ್ ಐಆರ್

20/08/2024, 12:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ
ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮೃತ ದುರ್ದೈವಿಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಮೃತಳಿಗೆ ಎರಡೂವರೆ ವರ್ಷದ ಒಂದು ಗುಂಡು ಮಗುವಿದೆ.

ಕಳೆದ 4 ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಜೊತೆ ಅವರ ವಿವಾಹವಾಗಿತ್ತು.
ನಿನ್ನೆ ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಸುಭಿಕ್ಷಾ ಶರಣಾಗಿದ್ದಾರೆ.
ತಹಶೀಲ್ದಾರ್ ಆಗಮಿಸದ ಹಿನ್ನೆಲೆ ಮೃತದೇಹವನ್ನ ಪೊಲೀಸರು ಕೆಳಗಿಳಿಸಲಿಲ್ಲ.
7 ವರ್ಷದ ಒಳಗೆ ಗೃಹಿಣಿ ಆತ್ಮಹತ್ಯೆಗೆ ಶರಣಾದ್ರೆ ತಹಶೀಲ್ದಾರ್ ರಿಂದ ಸ್ಪಾಟ್ ಮಹಜರ್ ಆಗಬೇಕಿದೆ.
ತಹಶೀಲ್ದಾರ್ ಆಗಮನದ ಬಳಿಕ ಮೃತದೇಹ ಪೊಲೀಸರು, ಕುಟುಂಬಸ್ಥರು ಕೆಳಗಿಳಿಸಿದ್ದಾರೆ.
ಮೃತಳ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.ಗಂಡ ಪ್ರವೀಣ್, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು