11:18 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ವರದಕ್ಷಿಣೆ ಕಿರುಕುಳ: ಗೃಹಿಣಿ ಅತ್ಮಹತ್ಯೆಗೆ ಶರಣು; ಗಂಡ, ಅತ್ತೆ, ಮಾವ ವಿರುದ್ಧ ಎಫ್ ಐಆರ್

20/08/2024, 12:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ
ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮೃತ ದುರ್ದೈವಿಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಮೃತಳಿಗೆ ಎರಡೂವರೆ ವರ್ಷದ ಒಂದು ಗುಂಡು ಮಗುವಿದೆ.

ಕಳೆದ 4 ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಜೊತೆ ಅವರ ವಿವಾಹವಾಗಿತ್ತು.
ನಿನ್ನೆ ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಸುಭಿಕ್ಷಾ ಶರಣಾಗಿದ್ದಾರೆ.
ತಹಶೀಲ್ದಾರ್ ಆಗಮಿಸದ ಹಿನ್ನೆಲೆ ಮೃತದೇಹವನ್ನ ಪೊಲೀಸರು ಕೆಳಗಿಳಿಸಲಿಲ್ಲ.
7 ವರ್ಷದ ಒಳಗೆ ಗೃಹಿಣಿ ಆತ್ಮಹತ್ಯೆಗೆ ಶರಣಾದ್ರೆ ತಹಶೀಲ್ದಾರ್ ರಿಂದ ಸ್ಪಾಟ್ ಮಹಜರ್ ಆಗಬೇಕಿದೆ.
ತಹಶೀಲ್ದಾರ್ ಆಗಮನದ ಬಳಿಕ ಮೃತದೇಹ ಪೊಲೀಸರು, ಕುಟುಂಬಸ್ಥರು ಕೆಳಗಿಳಿಸಿದ್ದಾರೆ.
ಮೃತಳ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.ಗಂಡ ಪ್ರವೀಣ್, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು