9:01 PM Friday28 - November 2025
ಬ್ರೇಕಿಂಗ್ ನ್ಯೂಸ್
Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

ವರದಕ್ಷಿಣೆ ಕಿರುಕುಳ: ಗೃಹಿಣಿ ಅತ್ಮಹತ್ಯೆಗೆ ಶರಣು; ಗಂಡ, ಅತ್ತೆ, ಮಾವ ವಿರುದ್ಧ ಎಫ್ ಐಆರ್

20/08/2024, 12:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ
ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮೃತ ದುರ್ದೈವಿಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಮೃತಳಿಗೆ ಎರಡೂವರೆ ವರ್ಷದ ಒಂದು ಗುಂಡು ಮಗುವಿದೆ.

ಕಳೆದ 4 ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಜೊತೆ ಅವರ ವಿವಾಹವಾಗಿತ್ತು.
ನಿನ್ನೆ ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಸುಭಿಕ್ಷಾ ಶರಣಾಗಿದ್ದಾರೆ.
ತಹಶೀಲ್ದಾರ್ ಆಗಮಿಸದ ಹಿನ್ನೆಲೆ ಮೃತದೇಹವನ್ನ ಪೊಲೀಸರು ಕೆಳಗಿಳಿಸಲಿಲ್ಲ.
7 ವರ್ಷದ ಒಳಗೆ ಗೃಹಿಣಿ ಆತ್ಮಹತ್ಯೆಗೆ ಶರಣಾದ್ರೆ ತಹಶೀಲ್ದಾರ್ ರಿಂದ ಸ್ಪಾಟ್ ಮಹಜರ್ ಆಗಬೇಕಿದೆ.
ತಹಶೀಲ್ದಾರ್ ಆಗಮನದ ಬಳಿಕ ಮೃತದೇಹ ಪೊಲೀಸರು, ಕುಟುಂಬಸ್ಥರು ಕೆಳಗಿಳಿಸಿದ್ದಾರೆ.
ಮೃತಳ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.ಗಂಡ ಪ್ರವೀಣ್, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು