8:08 PM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು…

ಇತ್ತೀಚಿನ ಸುದ್ದಿ

ವರದಕ್ಷಿಣೆ ಕಿರುಕುಳ: ಗೃಹಿಣಿ ಅತ್ಮಹತ್ಯೆಗೆ ಶರಣು; ಗಂಡ, ಅತ್ತೆ, ಮಾವ ವಿರುದ್ಧ ಎಫ್ ಐಆರ್

20/08/2024, 12:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ
ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮೃತ ದುರ್ದೈವಿಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಮೃತಳಿಗೆ ಎರಡೂವರೆ ವರ್ಷದ ಒಂದು ಗುಂಡು ಮಗುವಿದೆ.

ಕಳೆದ 4 ವರ್ಷಗಳ ಹಿಂದೆ ಚಂದುವಳ್ಳಿಯ ಪ್ರವೀಣ್ ಜೊತೆ ಅವರ ವಿವಾಹವಾಗಿತ್ತು.
ನಿನ್ನೆ ಸಂಜೆ 4 ಗಂಟೆಗೆ ಆತ್ಮಹತ್ಯೆಗೆ ಸುಭಿಕ್ಷಾ ಶರಣಾಗಿದ್ದಾರೆ.
ತಹಶೀಲ್ದಾರ್ ಆಗಮಿಸದ ಹಿನ್ನೆಲೆ ಮೃತದೇಹವನ್ನ ಪೊಲೀಸರು ಕೆಳಗಿಳಿಸಲಿಲ್ಲ.
7 ವರ್ಷದ ಒಳಗೆ ಗೃಹಿಣಿ ಆತ್ಮಹತ್ಯೆಗೆ ಶರಣಾದ್ರೆ ತಹಶೀಲ್ದಾರ್ ರಿಂದ ಸ್ಪಾಟ್ ಮಹಜರ್ ಆಗಬೇಕಿದೆ.
ತಹಶೀಲ್ದಾರ್ ಆಗಮನದ ಬಳಿಕ ಮೃತದೇಹ ಪೊಲೀಸರು, ಕುಟುಂಬಸ್ಥರು ಕೆಳಗಿಳಿಸಿದ್ದಾರೆ.
ಮೃತಳ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.ಗಂಡ ಪ್ರವೀಣ್, ಅತ್ತೆ ಲಕ್ಷ್ಮಿ, ಮಾವ ಚಂದ್ರೇಗೌಡ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು