7:33 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ; ಇಬ್ಬರ ಸಾವು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

20/03/2022, 15:19

ಬೆಂಗಳೂರು(reporterkarnataka.com):  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ್ರಾಮದ ರೈತ ಸಿದ್ದಲಿಂಗನಾಯಕ (72) ಅವರು ಜಮೀನಿನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರದ ರೆಂಬೆ ಬಿದ್ದು ಮಲ್ಲಮ್ಮ (53) ಅಸುನೀಗಿದ್ದಾರೆ.

ವಿವಿಧ ಗ್ರಾಮಗಳಲ್ಲಿ ಮನೆಗಳ ಚಾವಣಿ, ಹೆಂಚುಗಳು ಹಾನಿಗೊಂಡಿವೆ. ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸಿಡಿಲು ಬಡಿದು ಟ್ರಾಕ್ಟರ್ ಮಂಜು ಅವರ ಎತ್ತು ಮೃತಪಟ್ಟಿದೆ. ಉತ್ತರ ಕರ್ನಾಟಕದ ಕೆಲವೆಡೆಯೂ ಗುಡುಗು, ಸಿಡಿಲಿನಿಂದ ಮಳೆ ಸುರಿದಿದೆ.

ಹಾವೇರಿ ಜಿಲ್ಲೆಯ ಅರಳೇಶ್ವರ ಗ್ರಾಮ ಸೇರಿದಂತೆ ಕೆಲವೆಡೆ ಭಾರೀ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದು ಜನರು ಸಂತಸಗೊಂಡಿದ್ದಾರೆ.

ಶಿರಸಿಯಲ್ಲೂ ಸುರಿದ ಭಾರೀ ಮಳೆ ಗಾಳಿಗೆ ಮಾರಿಕಾಂಬ ಗದ್ದುಗೆಯ ಚಪ್ಪರ ಕುಸಿತಗೊಂಡಿದೆ. ಜಾತ್ರಾ ಪೇಟೆಯ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟ ಆಟಿಗೆ ವಸ್ತುಗೆಳೆಲ್ಲಾ ಹಾಳಾಗಿ, ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಗಾಳಿ-ಮಳೆಗೆ ಕಬ್ಬಿಣದ ಶೀಟ್​ಗಳು ಹಾರಿ ಹೋಗಿವೆ. ಶೃಂಗೇರಿ, ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಆಗಿದ್ದು, ವರ್ಷದ ಮೊದಲ ಮಳೆಯ ಅಬ್ಬರ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಕೊಡಗಿನ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಸುಂಟಿಕೊಪ್ಪ ನಾಪೋಕ್ಲು ವಿರಾಜಪೇಟೆಯಲ್ಲಿ ವರುಣನ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು