11:13 AM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ; ಇಬ್ಬರ ಸಾವು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

20/03/2022, 15:19

ಬೆಂಗಳೂರು(reporterkarnataka.com):  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ್ರಾಮದ ರೈತ ಸಿದ್ದಲಿಂಗನಾಯಕ (72) ಅವರು ಜಮೀನಿನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರದ ರೆಂಬೆ ಬಿದ್ದು ಮಲ್ಲಮ್ಮ (53) ಅಸುನೀಗಿದ್ದಾರೆ.

ವಿವಿಧ ಗ್ರಾಮಗಳಲ್ಲಿ ಮನೆಗಳ ಚಾವಣಿ, ಹೆಂಚುಗಳು ಹಾನಿಗೊಂಡಿವೆ. ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸಿಡಿಲು ಬಡಿದು ಟ್ರಾಕ್ಟರ್ ಮಂಜು ಅವರ ಎತ್ತು ಮೃತಪಟ್ಟಿದೆ. ಉತ್ತರ ಕರ್ನಾಟಕದ ಕೆಲವೆಡೆಯೂ ಗುಡುಗು, ಸಿಡಿಲಿನಿಂದ ಮಳೆ ಸುರಿದಿದೆ.

ಹಾವೇರಿ ಜಿಲ್ಲೆಯ ಅರಳೇಶ್ವರ ಗ್ರಾಮ ಸೇರಿದಂತೆ ಕೆಲವೆಡೆ ಭಾರೀ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದು ಜನರು ಸಂತಸಗೊಂಡಿದ್ದಾರೆ.

ಶಿರಸಿಯಲ್ಲೂ ಸುರಿದ ಭಾರೀ ಮಳೆ ಗಾಳಿಗೆ ಮಾರಿಕಾಂಬ ಗದ್ದುಗೆಯ ಚಪ್ಪರ ಕುಸಿತಗೊಂಡಿದೆ. ಜಾತ್ರಾ ಪೇಟೆಯ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟ ಆಟಿಗೆ ವಸ್ತುಗೆಳೆಲ್ಲಾ ಹಾಳಾಗಿ, ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಗಾಳಿ-ಮಳೆಗೆ ಕಬ್ಬಿಣದ ಶೀಟ್​ಗಳು ಹಾರಿ ಹೋಗಿವೆ. ಶೃಂಗೇರಿ, ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಆಗಿದ್ದು, ವರ್ಷದ ಮೊದಲ ಮಳೆಯ ಅಬ್ಬರ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಕೊಡಗಿನ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಸುಂಟಿಕೊಪ್ಪ ನಾಪೋಕ್ಲು ವಿರಾಜಪೇಟೆಯಲ್ಲಿ ವರುಣನ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು