8:03 PM Friday9 - January 2026
ಬ್ರೇಕಿಂಗ್ ನ್ಯೂಸ್
ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ; ಇಬ್ಬರ ಸಾವು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

20/03/2022, 15:19

ಬೆಂಗಳೂರು(reporterkarnataka.com):  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ್ರಾಮದ ರೈತ ಸಿದ್ದಲಿಂಗನಾಯಕ (72) ಅವರು ಜಮೀನಿನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರದ ರೆಂಬೆ ಬಿದ್ದು ಮಲ್ಲಮ್ಮ (53) ಅಸುನೀಗಿದ್ದಾರೆ.

ವಿವಿಧ ಗ್ರಾಮಗಳಲ್ಲಿ ಮನೆಗಳ ಚಾವಣಿ, ಹೆಂಚುಗಳು ಹಾನಿಗೊಂಡಿವೆ. ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸಿಡಿಲು ಬಡಿದು ಟ್ರಾಕ್ಟರ್ ಮಂಜು ಅವರ ಎತ್ತು ಮೃತಪಟ್ಟಿದೆ. ಉತ್ತರ ಕರ್ನಾಟಕದ ಕೆಲವೆಡೆಯೂ ಗುಡುಗು, ಸಿಡಿಲಿನಿಂದ ಮಳೆ ಸುರಿದಿದೆ.

ಹಾವೇರಿ ಜಿಲ್ಲೆಯ ಅರಳೇಶ್ವರ ಗ್ರಾಮ ಸೇರಿದಂತೆ ಕೆಲವೆಡೆ ಭಾರೀ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದು ಜನರು ಸಂತಸಗೊಂಡಿದ್ದಾರೆ.

ಶಿರಸಿಯಲ್ಲೂ ಸುರಿದ ಭಾರೀ ಮಳೆ ಗಾಳಿಗೆ ಮಾರಿಕಾಂಬ ಗದ್ದುಗೆಯ ಚಪ್ಪರ ಕುಸಿತಗೊಂಡಿದೆ. ಜಾತ್ರಾ ಪೇಟೆಯ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟ ಆಟಿಗೆ ವಸ್ತುಗೆಳೆಲ್ಲಾ ಹಾಳಾಗಿ, ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಗಾಳಿ-ಮಳೆಗೆ ಕಬ್ಬಿಣದ ಶೀಟ್​ಗಳು ಹಾರಿ ಹೋಗಿವೆ. ಶೃಂಗೇರಿ, ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಆಗಿದ್ದು, ವರ್ಷದ ಮೊದಲ ಮಳೆಯ ಅಬ್ಬರ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಕೊಡಗಿನ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಸುಂಟಿಕೊಪ್ಪ ನಾಪೋಕ್ಲು ವಿರಾಜಪೇಟೆಯಲ್ಲಿ ವರುಣನ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು