12:40 PM Friday5 - December 2025
ಬ್ರೇಕಿಂಗ್ ನ್ಯೂಸ್
New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ; ಇಬ್ಬರ ಸಾವು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

20/03/2022, 15:19

ಬೆಂಗಳೂರು(reporterkarnataka.com):  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ್ರಾಮದ ರೈತ ಸಿದ್ದಲಿಂಗನಾಯಕ (72) ಅವರು ಜಮೀನಿನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರದ ರೆಂಬೆ ಬಿದ್ದು ಮಲ್ಲಮ್ಮ (53) ಅಸುನೀಗಿದ್ದಾರೆ.

ವಿವಿಧ ಗ್ರಾಮಗಳಲ್ಲಿ ಮನೆಗಳ ಚಾವಣಿ, ಹೆಂಚುಗಳು ಹಾನಿಗೊಂಡಿವೆ. ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸಿಡಿಲು ಬಡಿದು ಟ್ರಾಕ್ಟರ್ ಮಂಜು ಅವರ ಎತ್ತು ಮೃತಪಟ್ಟಿದೆ. ಉತ್ತರ ಕರ್ನಾಟಕದ ಕೆಲವೆಡೆಯೂ ಗುಡುಗು, ಸಿಡಿಲಿನಿಂದ ಮಳೆ ಸುರಿದಿದೆ.

ಹಾವೇರಿ ಜಿಲ್ಲೆಯ ಅರಳೇಶ್ವರ ಗ್ರಾಮ ಸೇರಿದಂತೆ ಕೆಲವೆಡೆ ಭಾರೀ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದು ಜನರು ಸಂತಸಗೊಂಡಿದ್ದಾರೆ.

ಶಿರಸಿಯಲ್ಲೂ ಸುರಿದ ಭಾರೀ ಮಳೆ ಗಾಳಿಗೆ ಮಾರಿಕಾಂಬ ಗದ್ದುಗೆಯ ಚಪ್ಪರ ಕುಸಿತಗೊಂಡಿದೆ. ಜಾತ್ರಾ ಪೇಟೆಯ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟ ಆಟಿಗೆ ವಸ್ತುಗೆಳೆಲ್ಲಾ ಹಾಳಾಗಿ, ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಗಾಳಿ-ಮಳೆಗೆ ಕಬ್ಬಿಣದ ಶೀಟ್​ಗಳು ಹಾರಿ ಹೋಗಿವೆ. ಶೃಂಗೇರಿ, ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಆಗಿದ್ದು, ವರ್ಷದ ಮೊದಲ ಮಳೆಯ ಅಬ್ಬರ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಕೊಡಗಿನ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಸುಂಟಿಕೊಪ್ಪ ನಾಪೋಕ್ಲು ವಿರಾಜಪೇಟೆಯಲ್ಲಿ ವರುಣನ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು