4:34 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ; ಇಬ್ಬರ ಸಾವು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

20/03/2022, 15:19

ಬೆಂಗಳೂರು(reporterkarnataka.com):  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ್ರಾಮದ ರೈತ ಸಿದ್ದಲಿಂಗನಾಯಕ (72) ಅವರು ಜಮೀನಿನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರದ ರೆಂಬೆ ಬಿದ್ದು ಮಲ್ಲಮ್ಮ (53) ಅಸುನೀಗಿದ್ದಾರೆ.

ವಿವಿಧ ಗ್ರಾಮಗಳಲ್ಲಿ ಮನೆಗಳ ಚಾವಣಿ, ಹೆಂಚುಗಳು ಹಾನಿಗೊಂಡಿವೆ. ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸಿಡಿಲು ಬಡಿದು ಟ್ರಾಕ್ಟರ್ ಮಂಜು ಅವರ ಎತ್ತು ಮೃತಪಟ್ಟಿದೆ. ಉತ್ತರ ಕರ್ನಾಟಕದ ಕೆಲವೆಡೆಯೂ ಗುಡುಗು, ಸಿಡಿಲಿನಿಂದ ಮಳೆ ಸುರಿದಿದೆ.

ಹಾವೇರಿ ಜಿಲ್ಲೆಯ ಅರಳೇಶ್ವರ ಗ್ರಾಮ ಸೇರಿದಂತೆ ಕೆಲವೆಡೆ ಭಾರೀ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದು ಜನರು ಸಂತಸಗೊಂಡಿದ್ದಾರೆ.

ಶಿರಸಿಯಲ್ಲೂ ಸುರಿದ ಭಾರೀ ಮಳೆ ಗಾಳಿಗೆ ಮಾರಿಕಾಂಬ ಗದ್ದುಗೆಯ ಚಪ್ಪರ ಕುಸಿತಗೊಂಡಿದೆ. ಜಾತ್ರಾ ಪೇಟೆಯ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟ ಆಟಿಗೆ ವಸ್ತುಗೆಳೆಲ್ಲಾ ಹಾಳಾಗಿ, ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಗಾಳಿ-ಮಳೆಗೆ ಕಬ್ಬಿಣದ ಶೀಟ್​ಗಳು ಹಾರಿ ಹೋಗಿವೆ. ಶೃಂಗೇರಿ, ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಆಗಿದ್ದು, ವರ್ಷದ ಮೊದಲ ಮಳೆಯ ಅಬ್ಬರ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಕೊಡಗಿನ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಸುಂಟಿಕೊಪ್ಪ ನಾಪೋಕ್ಲು ವಿರಾಜಪೇಟೆಯಲ್ಲಿ ವರುಣನ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು