3:55 PM Friday12 - December 2025
ಬ್ರೇಕಿಂಗ್ ನ್ಯೂಸ್
ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ; ಇಬ್ಬರ ಸಾವು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

20/03/2022, 15:19

ಬೆಂಗಳೂರು(reporterkarnataka.com):  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ್ರಾಮದ ರೈತ ಸಿದ್ದಲಿಂಗನಾಯಕ (72) ಅವರು ಜಮೀನಿನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರದ ರೆಂಬೆ ಬಿದ್ದು ಮಲ್ಲಮ್ಮ (53) ಅಸುನೀಗಿದ್ದಾರೆ.

ವಿವಿಧ ಗ್ರಾಮಗಳಲ್ಲಿ ಮನೆಗಳ ಚಾವಣಿ, ಹೆಂಚುಗಳು ಹಾನಿಗೊಂಡಿವೆ. ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸಿಡಿಲು ಬಡಿದು ಟ್ರಾಕ್ಟರ್ ಮಂಜು ಅವರ ಎತ್ತು ಮೃತಪಟ್ಟಿದೆ. ಉತ್ತರ ಕರ್ನಾಟಕದ ಕೆಲವೆಡೆಯೂ ಗುಡುಗು, ಸಿಡಿಲಿನಿಂದ ಮಳೆ ಸುರಿದಿದೆ.

ಹಾವೇರಿ ಜಿಲ್ಲೆಯ ಅರಳೇಶ್ವರ ಗ್ರಾಮ ಸೇರಿದಂತೆ ಕೆಲವೆಡೆ ಭಾರೀ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದು ಜನರು ಸಂತಸಗೊಂಡಿದ್ದಾರೆ.

ಶಿರಸಿಯಲ್ಲೂ ಸುರಿದ ಭಾರೀ ಮಳೆ ಗಾಳಿಗೆ ಮಾರಿಕಾಂಬ ಗದ್ದುಗೆಯ ಚಪ್ಪರ ಕುಸಿತಗೊಂಡಿದೆ. ಜಾತ್ರಾ ಪೇಟೆಯ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟ ಆಟಿಗೆ ವಸ್ತುಗೆಳೆಲ್ಲಾ ಹಾಳಾಗಿ, ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಗಾಳಿ-ಮಳೆಗೆ ಕಬ್ಬಿಣದ ಶೀಟ್​ಗಳು ಹಾರಿ ಹೋಗಿವೆ. ಶೃಂಗೇರಿ, ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಆಗಿದ್ದು, ವರ್ಷದ ಮೊದಲ ಮಳೆಯ ಅಬ್ಬರ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಕೊಡಗಿನ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಸುಂಟಿಕೊಪ್ಪ ನಾಪೋಕ್ಲು ವಿರಾಜಪೇಟೆಯಲ್ಲಿ ವರುಣನ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು