7:12 AM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ; ಇಬ್ಬರ ಸಾವು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

20/03/2022, 15:19

ಬೆಂಗಳೂರು(reporterkarnataka.com):  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ್ರಾಮದ ರೈತ ಸಿದ್ದಲಿಂಗನಾಯಕ (72) ಅವರು ಜಮೀನಿನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರದ ರೆಂಬೆ ಬಿದ್ದು ಮಲ್ಲಮ್ಮ (53) ಅಸುನೀಗಿದ್ದಾರೆ.

ವಿವಿಧ ಗ್ರಾಮಗಳಲ್ಲಿ ಮನೆಗಳ ಚಾವಣಿ, ಹೆಂಚುಗಳು ಹಾನಿಗೊಂಡಿವೆ. ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸಿಡಿಲು ಬಡಿದು ಟ್ರಾಕ್ಟರ್ ಮಂಜು ಅವರ ಎತ್ತು ಮೃತಪಟ್ಟಿದೆ. ಉತ್ತರ ಕರ್ನಾಟಕದ ಕೆಲವೆಡೆಯೂ ಗುಡುಗು, ಸಿಡಿಲಿನಿಂದ ಮಳೆ ಸುರಿದಿದೆ.

ಹಾವೇರಿ ಜಿಲ್ಲೆಯ ಅರಳೇಶ್ವರ ಗ್ರಾಮ ಸೇರಿದಂತೆ ಕೆಲವೆಡೆ ಭಾರೀ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದು ಜನರು ಸಂತಸಗೊಂಡಿದ್ದಾರೆ.

ಶಿರಸಿಯಲ್ಲೂ ಸುರಿದ ಭಾರೀ ಮಳೆ ಗಾಳಿಗೆ ಮಾರಿಕಾಂಬ ಗದ್ದುಗೆಯ ಚಪ್ಪರ ಕುಸಿತಗೊಂಡಿದೆ. ಜಾತ್ರಾ ಪೇಟೆಯ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟ ಆಟಿಗೆ ವಸ್ತುಗೆಳೆಲ್ಲಾ ಹಾಳಾಗಿ, ವ್ಯಾಪಾರಿಗಳಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಗಾಳಿ-ಮಳೆಗೆ ಕಬ್ಬಿಣದ ಶೀಟ್​ಗಳು ಹಾರಿ ಹೋಗಿವೆ. ಶೃಂಗೇರಿ, ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಆಗಿದ್ದು, ವರ್ಷದ ಮೊದಲ ಮಳೆಯ ಅಬ್ಬರ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಕೊಡಗಿನ ಸುತ್ತಮುತ್ತ ಭಾರೀ ಮಳೆ ಸುರಿದಿದೆ. ಸುಂಟಿಕೊಪ್ಪ ನಾಪೋಕ್ಲು ವಿರಾಜಪೇಟೆಯಲ್ಲಿ ವರುಣನ ಆರ್ಭಟಕ್ಕೆ ಜನರು ತತ್ತರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು