9:40 PM Saturday25 - April 2026
ಬ್ರೇಕಿಂಗ್ ನ್ಯೂಸ್
ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

13/09/2024, 22:18

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್‌ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ರಾಜ್ಯದಾದ್ಯಂತ ಯುವ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಆಗಸ್ಟ್‌ 20ರಂದು ಆರಂಭವಾಗಿದೆ. ಈ ಅಭಿಯಾನ ಸೆ. 20ರ ವರೆಗೆ ನಡೆಯಲಿದೆ. ಸದಸ್ಯತ್ವ ನೋಂದಣಿಯ ಜೊತೆಗೆ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಬಾರಿ ಅಧ್ಯಕ್ಷ ಸ್ಥಾನಕ್ಕಿಂತಲೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ತೀವ್ರ ಕುತೂಹಲ ಮೂಡಿಸಿದೆ. 35 ಸ್ಥಾನದ ಈ ಹುದ್ದೆಗೆ 101 ಜನ ಅಭ್ಯರ್ಥಿಗಳು ಕಣಕ್ಕಿಳಿದಿದ್ದು 6 ಅಭ್ಯರ್ಥಿಗಳು ಮಾಜಿ ಶಾಸಕರು ಹಾಗೂ ಸಚಿವರ ಪುತ್ರರು. ಕಳೆದ ಎರಡು ಬಾರಿ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿದ್ದರೂ ಈ ಬಾರಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುರೈಯ್ಯ ಅಂಜುಮ್ ಕಣಕ್ಕಿಳಿದಿದ್ದಾರೆ. ರಾಜ್ಯಾದ್ಯಂತ ಅತಿ ಹೆಚ್ಚಾಗಿ ಇವರ ಹೆಸರು ಕೇಳಿ ಬಂದಿದೆ. ಒಟ್ಟಿನಲ್ಲಿ ಒಂದು ಕಾಲದಲ್ಲಿ ಕೇವಲ ಪುರುಷರೆ ಅತಿ ಹೆಚ್ಚಾಗಿ ಇರುತ್ತಿದ್ದ ಯುವ ಕಾಂಗ್ರೆಸ್ ನಲ್ಲಿ ಈ ಬಾರಿ ಮಹಿಳೆಯರು ಪುರುಷ ಅಭ್ಯರ್ಥಿಗಳಿಗೆ ಫೈಟ್ ನೀಡುತ್ತಿದ್ದಾರೆ. ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಮೂಡಿದ ಆಸಕ್ತಿ ಎಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಆಗಲಿದೆಯೇ ಎನ್ನುವುದು ಡಾಲರ್ ಪ್ರಶ್ನೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು