3:20 PM Monday13 - April 2026
ಬ್ರೇಕಿಂಗ್ ನ್ಯೂಸ್
ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ…

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

13/09/2024, 22:18

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್‌ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ರಾಜ್ಯದಾದ್ಯಂತ ಯುವ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಆಗಸ್ಟ್‌ 20ರಂದು ಆರಂಭವಾಗಿದೆ. ಈ ಅಭಿಯಾನ ಸೆ. 20ರ ವರೆಗೆ ನಡೆಯಲಿದೆ. ಸದಸ್ಯತ್ವ ನೋಂದಣಿಯ ಜೊತೆಗೆ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಬಾರಿ ಅಧ್ಯಕ್ಷ ಸ್ಥಾನಕ್ಕಿಂತಲೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ತೀವ್ರ ಕುತೂಹಲ ಮೂಡಿಸಿದೆ. 35 ಸ್ಥಾನದ ಈ ಹುದ್ದೆಗೆ 101 ಜನ ಅಭ್ಯರ್ಥಿಗಳು ಕಣಕ್ಕಿಳಿದಿದ್ದು 6 ಅಭ್ಯರ್ಥಿಗಳು ಮಾಜಿ ಶಾಸಕರು ಹಾಗೂ ಸಚಿವರ ಪುತ್ರರು. ಕಳೆದ ಎರಡು ಬಾರಿ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿದ್ದರೂ ಈ ಬಾರಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುರೈಯ್ಯ ಅಂಜುಮ್ ಕಣಕ್ಕಿಳಿದಿದ್ದಾರೆ. ರಾಜ್ಯಾದ್ಯಂತ ಅತಿ ಹೆಚ್ಚಾಗಿ ಇವರ ಹೆಸರು ಕೇಳಿ ಬಂದಿದೆ. ಒಟ್ಟಿನಲ್ಲಿ ಒಂದು ಕಾಲದಲ್ಲಿ ಕೇವಲ ಪುರುಷರೆ ಅತಿ ಹೆಚ್ಚಾಗಿ ಇರುತ್ತಿದ್ದ ಯುವ ಕಾಂಗ್ರೆಸ್ ನಲ್ಲಿ ಈ ಬಾರಿ ಮಹಿಳೆಯರು ಪುರುಷ ಅಭ್ಯರ್ಥಿಗಳಿಗೆ ಫೈಟ್ ನೀಡುತ್ತಿದ್ದಾರೆ. ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಮೂಡಿದ ಆಸಕ್ತಿ ಎಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಆಗಲಿದೆಯೇ ಎನ್ನುವುದು ಡಾಲರ್ ಪ್ರಶ್ನೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು