5:22 AM Friday31 - July 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

13/09/2024, 22:18

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್‌ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ರಾಜ್ಯದಾದ್ಯಂತ ಯುವ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಆಗಸ್ಟ್‌ 20ರಂದು ಆರಂಭವಾಗಿದೆ. ಈ ಅಭಿಯಾನ ಸೆ. 20ರ ವರೆಗೆ ನಡೆಯಲಿದೆ. ಸದಸ್ಯತ್ವ ನೋಂದಣಿಯ ಜೊತೆಗೆ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಬಾರಿ ಅಧ್ಯಕ್ಷ ಸ್ಥಾನಕ್ಕಿಂತಲೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ತೀವ್ರ ಕುತೂಹಲ ಮೂಡಿಸಿದೆ. 35 ಸ್ಥಾನದ ಈ ಹುದ್ದೆಗೆ 101 ಜನ ಅಭ್ಯರ್ಥಿಗಳು ಕಣಕ್ಕಿಳಿದಿದ್ದು 6 ಅಭ್ಯರ್ಥಿಗಳು ಮಾಜಿ ಶಾಸಕರು ಹಾಗೂ ಸಚಿವರ ಪುತ್ರರು. ಕಳೆದ ಎರಡು ಬಾರಿ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿದ್ದರೂ ಈ ಬಾರಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುರೈಯ್ಯ ಅಂಜುಮ್ ಕಣಕ್ಕಿಳಿದಿದ್ದಾರೆ. ರಾಜ್ಯಾದ್ಯಂತ ಅತಿ ಹೆಚ್ಚಾಗಿ ಇವರ ಹೆಸರು ಕೇಳಿ ಬಂದಿದೆ. ಒಟ್ಟಿನಲ್ಲಿ ಒಂದು ಕಾಲದಲ್ಲಿ ಕೇವಲ ಪುರುಷರೆ ಅತಿ ಹೆಚ್ಚಾಗಿ ಇರುತ್ತಿದ್ದ ಯುವ ಕಾಂಗ್ರೆಸ್ ನಲ್ಲಿ ಈ ಬಾರಿ ಮಹಿಳೆಯರು ಪುರುಷ ಅಭ್ಯರ್ಥಿಗಳಿಗೆ ಫೈಟ್ ನೀಡುತ್ತಿದ್ದಾರೆ. ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಮೂಡಿದ ಆಸಕ್ತಿ ಎಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಆಗಲಿದೆಯೇ ಎನ್ನುವುದು ಡಾಲರ್ ಪ್ರಶ್ನೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು