3:22 PM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

13/09/2024, 22:18

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್‌ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ರಾಜ್ಯದಾದ್ಯಂತ ಯುವ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಆಗಸ್ಟ್‌ 20ರಂದು ಆರಂಭವಾಗಿದೆ. ಈ ಅಭಿಯಾನ ಸೆ. 20ರ ವರೆಗೆ ನಡೆಯಲಿದೆ. ಸದಸ್ಯತ್ವ ನೋಂದಣಿಯ ಜೊತೆಗೆ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಬಾರಿ ಅಧ್ಯಕ್ಷ ಸ್ಥಾನಕ್ಕಿಂತಲೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ತೀವ್ರ ಕುತೂಹಲ ಮೂಡಿಸಿದೆ. 35 ಸ್ಥಾನದ ಈ ಹುದ್ದೆಗೆ 101 ಜನ ಅಭ್ಯರ್ಥಿಗಳು ಕಣಕ್ಕಿಳಿದಿದ್ದು 6 ಅಭ್ಯರ್ಥಿಗಳು ಮಾಜಿ ಶಾಸಕರು ಹಾಗೂ ಸಚಿವರ ಪುತ್ರರು. ಕಳೆದ ಎರಡು ಬಾರಿ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿದ್ದರೂ ಈ ಬಾರಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುರೈಯ್ಯ ಅಂಜುಮ್ ಕಣಕ್ಕಿಳಿದಿದ್ದಾರೆ. ರಾಜ್ಯಾದ್ಯಂತ ಅತಿ ಹೆಚ್ಚಾಗಿ ಇವರ ಹೆಸರು ಕೇಳಿ ಬಂದಿದೆ. ಒಟ್ಟಿನಲ್ಲಿ ಒಂದು ಕಾಲದಲ್ಲಿ ಕೇವಲ ಪುರುಷರೆ ಅತಿ ಹೆಚ್ಚಾಗಿ ಇರುತ್ತಿದ್ದ ಯುವ ಕಾಂಗ್ರೆಸ್ ನಲ್ಲಿ ಈ ಬಾರಿ ಮಹಿಳೆಯರು ಪುರುಷ ಅಭ್ಯರ್ಥಿಗಳಿಗೆ ಫೈಟ್ ನೀಡುತ್ತಿದ್ದಾರೆ. ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಮೂಡಿದ ಆಸಕ್ತಿ ಎಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಆಗಲಿದೆಯೇ ಎನ್ನುವುದು ಡಾಲರ್ ಪ್ರಶ್ನೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು