3:55 PM Saturday18 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ?

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

13/09/2024, 22:18

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್‌ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ರಾಜ್ಯದಾದ್ಯಂತ ಯುವ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಆಗಸ್ಟ್‌ 20ರಂದು ಆರಂಭವಾಗಿದೆ. ಈ ಅಭಿಯಾನ ಸೆ. 20ರ ವರೆಗೆ ನಡೆಯಲಿದೆ. ಸದಸ್ಯತ್ವ ನೋಂದಣಿಯ ಜೊತೆಗೆ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಬಾರಿ ಅಧ್ಯಕ್ಷ ಸ್ಥಾನಕ್ಕಿಂತಲೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ತೀವ್ರ ಕುತೂಹಲ ಮೂಡಿಸಿದೆ. 35 ಸ್ಥಾನದ ಈ ಹುದ್ದೆಗೆ 101 ಜನ ಅಭ್ಯರ್ಥಿಗಳು ಕಣಕ್ಕಿಳಿದಿದ್ದು 6 ಅಭ್ಯರ್ಥಿಗಳು ಮಾಜಿ ಶಾಸಕರು ಹಾಗೂ ಸಚಿವರ ಪುತ್ರರು. ಕಳೆದ ಎರಡು ಬಾರಿ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿದ್ದರೂ ಈ ಬಾರಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುರೈಯ್ಯ ಅಂಜುಮ್ ಕಣಕ್ಕಿಳಿದಿದ್ದಾರೆ. ರಾಜ್ಯಾದ್ಯಂತ ಅತಿ ಹೆಚ್ಚಾಗಿ ಇವರ ಹೆಸರು ಕೇಳಿ ಬಂದಿದೆ. ಒಟ್ಟಿನಲ್ಲಿ ಒಂದು ಕಾಲದಲ್ಲಿ ಕೇವಲ ಪುರುಷರೆ ಅತಿ ಹೆಚ್ಚಾಗಿ ಇರುತ್ತಿದ್ದ ಯುವ ಕಾಂಗ್ರೆಸ್ ನಲ್ಲಿ ಈ ಬಾರಿ ಮಹಿಳೆಯರು ಪುರುಷ ಅಭ್ಯರ್ಥಿಗಳಿಗೆ ಫೈಟ್ ನೀಡುತ್ತಿದ್ದಾರೆ. ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಮೂಡಿದ ಆಸಕ್ತಿ ಎಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಆಗಲಿದೆಯೇ ಎನ್ನುವುದು ಡಾಲರ್ ಪ್ರಶ್ನೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು