12:25 PM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

13/09/2024, 22:18

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್‌ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ರಾಜ್ಯದಾದ್ಯಂತ ಯುವ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಆಗಸ್ಟ್‌ 20ರಂದು ಆರಂಭವಾಗಿದೆ. ಈ ಅಭಿಯಾನ ಸೆ. 20ರ ವರೆಗೆ ನಡೆಯಲಿದೆ. ಸದಸ್ಯತ್ವ ನೋಂದಣಿಯ ಜೊತೆಗೆ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಬಾರಿ ಅಧ್ಯಕ್ಷ ಸ್ಥಾನಕ್ಕಿಂತಲೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ತೀವ್ರ ಕುತೂಹಲ ಮೂಡಿಸಿದೆ. 35 ಸ್ಥಾನದ ಈ ಹುದ್ದೆಗೆ 101 ಜನ ಅಭ್ಯರ್ಥಿಗಳು ಕಣಕ್ಕಿಳಿದಿದ್ದು 6 ಅಭ್ಯರ್ಥಿಗಳು ಮಾಜಿ ಶಾಸಕರು ಹಾಗೂ ಸಚಿವರ ಪುತ್ರರು. ಕಳೆದ ಎರಡು ಬಾರಿ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿದ್ದರೂ ಈ ಬಾರಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುರೈಯ್ಯ ಅಂಜುಮ್ ಕಣಕ್ಕಿಳಿದಿದ್ದಾರೆ. ರಾಜ್ಯಾದ್ಯಂತ ಅತಿ ಹೆಚ್ಚಾಗಿ ಇವರ ಹೆಸರು ಕೇಳಿ ಬಂದಿದೆ. ಒಟ್ಟಿನಲ್ಲಿ ಒಂದು ಕಾಲದಲ್ಲಿ ಕೇವಲ ಪುರುಷರೆ ಅತಿ ಹೆಚ್ಚಾಗಿ ಇರುತ್ತಿದ್ದ ಯುವ ಕಾಂಗ್ರೆಸ್ ನಲ್ಲಿ ಈ ಬಾರಿ ಮಹಿಳೆಯರು ಪುರುಷ ಅಭ್ಯರ್ಥಿಗಳಿಗೆ ಫೈಟ್ ನೀಡುತ್ತಿದ್ದಾರೆ. ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಮೂಡಿದ ಆಸಕ್ತಿ ಎಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಆಗಲಿದೆಯೇ ಎನ್ನುವುದು ಡಾಲರ್ ಪ್ರಶ್ನೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು