7:38 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

13/09/2024, 22:18

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್‌ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ರಾಜ್ಯದಾದ್ಯಂತ ಯುವ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಆಗಸ್ಟ್‌ 20ರಂದು ಆರಂಭವಾಗಿದೆ. ಈ ಅಭಿಯಾನ ಸೆ. 20ರ ವರೆಗೆ ನಡೆಯಲಿದೆ. ಸದಸ್ಯತ್ವ ನೋಂದಣಿಯ ಜೊತೆಗೆ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಬಾರಿ ಅಧ್ಯಕ್ಷ ಸ್ಥಾನಕ್ಕಿಂತಲೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ತೀವ್ರ ಕುತೂಹಲ ಮೂಡಿಸಿದೆ. 35 ಸ್ಥಾನದ ಈ ಹುದ್ದೆಗೆ 101 ಜನ ಅಭ್ಯರ್ಥಿಗಳು ಕಣಕ್ಕಿಳಿದಿದ್ದು 6 ಅಭ್ಯರ್ಥಿಗಳು ಮಾಜಿ ಶಾಸಕರು ಹಾಗೂ ಸಚಿವರ ಪುತ್ರರು. ಕಳೆದ ಎರಡು ಬಾರಿ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿದ್ದರೂ ಈ ಬಾರಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುರೈಯ್ಯ ಅಂಜುಮ್ ಕಣಕ್ಕಿಳಿದಿದ್ದಾರೆ. ರಾಜ್ಯಾದ್ಯಂತ ಅತಿ ಹೆಚ್ಚಾಗಿ ಇವರ ಹೆಸರು ಕೇಳಿ ಬಂದಿದೆ. ಒಟ್ಟಿನಲ್ಲಿ ಒಂದು ಕಾಲದಲ್ಲಿ ಕೇವಲ ಪುರುಷರೆ ಅತಿ ಹೆಚ್ಚಾಗಿ ಇರುತ್ತಿದ್ದ ಯುವ ಕಾಂಗ್ರೆಸ್ ನಲ್ಲಿ ಈ ಬಾರಿ ಮಹಿಳೆಯರು ಪುರುಷ ಅಭ್ಯರ್ಥಿಗಳಿಗೆ ಫೈಟ್ ನೀಡುತ್ತಿದ್ದಾರೆ. ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಮೂಡಿದ ಆಸಕ್ತಿ ಎಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಆಗಲಿದೆಯೇ ಎನ್ನುವುದು ಡಾಲರ್ ಪ್ರಶ್ನೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು