10:37 AM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

13/09/2024, 22:18

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್‌ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ರಾಜ್ಯದಾದ್ಯಂತ ಯುವ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಆಗಸ್ಟ್‌ 20ರಂದು ಆರಂಭವಾಗಿದೆ. ಈ ಅಭಿಯಾನ ಸೆ. 20ರ ವರೆಗೆ ನಡೆಯಲಿದೆ. ಸದಸ್ಯತ್ವ ನೋಂದಣಿಯ ಜೊತೆಗೆ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಬಾರಿ ಅಧ್ಯಕ್ಷ ಸ್ಥಾನಕ್ಕಿಂತಲೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ತೀವ್ರ ಕುತೂಹಲ ಮೂಡಿಸಿದೆ. 35 ಸ್ಥಾನದ ಈ ಹುದ್ದೆಗೆ 101 ಜನ ಅಭ್ಯರ್ಥಿಗಳು ಕಣಕ್ಕಿಳಿದಿದ್ದು 6 ಅಭ್ಯರ್ಥಿಗಳು ಮಾಜಿ ಶಾಸಕರು ಹಾಗೂ ಸಚಿವರ ಪುತ್ರರು. ಕಳೆದ ಎರಡು ಬಾರಿ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿದ್ದರೂ ಈ ಬಾರಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುರೈಯ್ಯ ಅಂಜುಮ್ ಕಣಕ್ಕಿಳಿದಿದ್ದಾರೆ. ರಾಜ್ಯಾದ್ಯಂತ ಅತಿ ಹೆಚ್ಚಾಗಿ ಇವರ ಹೆಸರು ಕೇಳಿ ಬಂದಿದೆ. ಒಟ್ಟಿನಲ್ಲಿ ಒಂದು ಕಾಲದಲ್ಲಿ ಕೇವಲ ಪುರುಷರೆ ಅತಿ ಹೆಚ್ಚಾಗಿ ಇರುತ್ತಿದ್ದ ಯುವ ಕಾಂಗ್ರೆಸ್ ನಲ್ಲಿ ಈ ಬಾರಿ ಮಹಿಳೆಯರು ಪುರುಷ ಅಭ್ಯರ್ಥಿಗಳಿಗೆ ಫೈಟ್ ನೀಡುತ್ತಿದ್ದಾರೆ. ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಮೂಡಿದ ಆಸಕ್ತಿ ಎಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಆಗಲಿದೆಯೇ ಎನ್ನುವುದು ಡಾಲರ್ ಪ್ರಶ್ನೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು