1:20 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

13/09/2024, 22:18

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್‌ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ರಾಜ್ಯದಾದ್ಯಂತ ಯುವ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಆಗಸ್ಟ್‌ 20ರಂದು ಆರಂಭವಾಗಿದೆ. ಈ ಅಭಿಯಾನ ಸೆ. 20ರ ವರೆಗೆ ನಡೆಯಲಿದೆ. ಸದಸ್ಯತ್ವ ನೋಂದಣಿಯ ಜೊತೆಗೆ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಬಾರಿ ಅಧ್ಯಕ್ಷ ಸ್ಥಾನಕ್ಕಿಂತಲೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ತೀವ್ರ ಕುತೂಹಲ ಮೂಡಿಸಿದೆ. 35 ಸ್ಥಾನದ ಈ ಹುದ್ದೆಗೆ 101 ಜನ ಅಭ್ಯರ್ಥಿಗಳು ಕಣಕ್ಕಿಳಿದಿದ್ದು 6 ಅಭ್ಯರ್ಥಿಗಳು ಮಾಜಿ ಶಾಸಕರು ಹಾಗೂ ಸಚಿವರ ಪುತ್ರರು. ಕಳೆದ ಎರಡು ಬಾರಿ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿದ್ದರೂ ಈ ಬಾರಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುರೈಯ್ಯ ಅಂಜುಮ್ ಕಣಕ್ಕಿಳಿದಿದ್ದಾರೆ. ರಾಜ್ಯಾದ್ಯಂತ ಅತಿ ಹೆಚ್ಚಾಗಿ ಇವರ ಹೆಸರು ಕೇಳಿ ಬಂದಿದೆ. ಒಟ್ಟಿನಲ್ಲಿ ಒಂದು ಕಾಲದಲ್ಲಿ ಕೇವಲ ಪುರುಷರೆ ಅತಿ ಹೆಚ್ಚಾಗಿ ಇರುತ್ತಿದ್ದ ಯುವ ಕಾಂಗ್ರೆಸ್ ನಲ್ಲಿ ಈ ಬಾರಿ ಮಹಿಳೆಯರು ಪುರುಷ ಅಭ್ಯರ್ಥಿಗಳಿಗೆ ಫೈಟ್ ನೀಡುತ್ತಿದ್ದಾರೆ. ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಮೂಡಿದ ಆಸಕ್ತಿ ಎಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಆಗಲಿದೆಯೇ ಎನ್ನುವುದು ಡಾಲರ್ ಪ್ರಶ್ನೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು